ಭಾಲ್ಕಿ (ಬೀದರ್ ಜಿಲ್ಲೆ): ಸಿಡಿಲು ಬಡಿದು ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ನಾವದಗಿ ಗ್ರಾಮದ ಹೊಲವೊಂದರಲ್ಲಿ ನಡೆದಿದೆ.
ಮೃತರು ನಾವದಗಿ ಗ್ರಾಮದ ರೇವಣಸಿದ್ದ ಹನುಮಂತ (28) ಮತ್ತು ಜೇವರ್ಗಿಯ ಯಲ್ಲಾಲಿಂಗ (28).
ಯುವಕರು ಗುರುವಾರ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಮಳೆ ಆರಂಭವಾಗಿದೆ. ಮಳೆಯಿಂದ ರ ರಕ್ಷಣೆ ರಕ್ಷಣೆ ಪಡೆಯಲು ಮಾವಿನ ಮರದಡಿ ಆಶ್ರಯ ಪಡೆದಿದ್ದರು. ಈ ಸಂದರ್ಭದಲ್ಲಿ ಸಿಡಿಲು ಬಿದ್ದು ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಈ ಕುರಿತು ಖಟಕ ಚಿಂಚೋಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.