Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಿಂಡಲಗಾ ಜೈಲಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಪ್ರಾಣ ಬೆದರಿಕೆ ಕರೆ !

ಹಿಂಡಲಗಾ ಜೈಲಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಪ್ರಾಣ ಬೆದರಿಕೆ ಕರೆ !

ಮೋದಿ ಸರ್ಕಾರದಲ್ಲಿ ನಿತಿನ್ ಗಡ್ಕರಿ ಅತ್ಯುತ್ತಮ ಕೆಲಸ ಮಾಡುವ ಮಂತ್ರಿಗಳಲ್ಲಿ ಒಬ್ಬರೆಂದು ಪರಿಗಣಿಸಲಾಗುತ್ತದೆ. ನಿತಿನ್ ಗಡ್ಕರಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ನಿತಿನ್ ಗಡ್ಕರಿ ಅವರು ಟ್ವಿಟರ್‌ನಲ್ಲಿ 12 ಮಿಲಿಯನ್‌ಗಿಂತಲೂ ಹೆಚ್ಚು ಫಾಲೋವರ್ಸ್ ಹೊಂದಿದ್ದಾರೆ. ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಬಂದ ನಂತರ ಭಾರಿ ಸಂಚಲನ ಉಂಟಾಗಿದೆ. ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.

ನಾಗಪುರದ ಖಮ್ಲಾ ಪ್ರದೇಶದಲ್ಲಿರುವ ಸಾರ್ವಜನಿಕ ಸಂಪರ್ಕ ಕಚೇರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ, ತಾನು ದಾವೂದ್ ಇಬ್ರಾಹಿಂ ತಂಡದ ಸದಸ್ಯನೆಂದು ಹೇಳಿಕೊಂಡು 100 ಕೋಟಿಗೆ ಬೇಡಿಕೆ ಇಟ್ಟಿದ್ದಾನೆ. ಗಡ್ಕರಿ ಅವರ ಕಚೇರಿ ಮತ್ತು ನಿವಾಸದ ಭದ್ರತೆ ಹೆಚ್ಚಿಸಲಾಗಿದೆ.
ಕರೆ ಮಾಡಿದಾತ ತನ್ನ ಮೊಬೈಲ್ ಸಂಖ್ಯೆ ಮತ್ತು ಕರ್ನಾಟಕದ ವಿಳಾಸ ಹಂಚಿಕೊಂಡಿದ್ದು, ಅಲ್ಲಿಗೆ ಹಣ ಕಳುಹಿಸುವಂತೆ ಹೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನನ್ನು ಪೊಲೀಸರು ಗುರುತಿಸಿದ್ದು, ಕರ್ನಾಟಕಕ್ಕೆ ಪೊಲೀಸ್ ತಂಡ ಕಳುಹಿಸಲಾಗಿದೆ.

 

ನಾಗಪುರ :
ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಕುಖ್ಯಾತ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹೆಸರಲ್ಲಿ ಜೀವ ಬೆದರಿಕೆ ಕರೆ ಹೋಗಿವೆ.

ಕರೆ ಮಾಡಿದ ವ್ಯಕ್ತಿ ಗಡ್ಕರಿ ಅವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಇರುವ ಕೈದಿ ಜೈಲಲ್ಲಿ ಮೊಬೈಲ್ ಸಂಪರ್ಕ ಹೊಂದಿದ್ದು ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದಾಗ ಈತ ಕೊಲೆ ಆರೋಪಿ ಎಂದು ದೃಢಪಟ್ಟಿದೆ.

ಗಡ್ಕರಿ ಅವರ ಸಾರ್ವಜನಿಕ ಸಂಪರ್ಕ ಕಚೇರಿಯ ಲ್ಯಾಂಡ್ ಲೈನ್ ದೂರವಾಣಿಗೆ ಶನಿವಾರ ಬೆಳಗ್ಗೆ 11:25, 11:32, 12:30 ಕ್ಕೆ 3 ಕರೆಗಳು ಹೋಗಿವೆ. ಕರೆ ಮಾಡಿದವ ದಾವೂದ್ ಗ್ಯಾಂಗ್ ನವನು ಎಂದು ಹೇಳಿಕೊಂಡಿದ್ದು ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ತಾನು ಕರ್ನಾಟಕದ ವ್ಯಕ್ತಿ ಎಂದು ಹೇಳಿ ಫೋನ್ ನಂಬರ್, ವಿಳಾಸ ತಿಳಿಸಿದ್ದಾನೆ.

ಈತನ ಬಂಧನಕ್ಕೆ ಮಹಾರಾಷ್ಟ್ರ ಪೊಲೀಸರು ಈಗ ಬೆಳಗಾವಿಗೆ ಆಗಮಿಸಿದ್ದು, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಭದ್ರತೆ ಸಹ ಹೆಚ್ಚಿಸಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ