Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಎಲ್ಲರಿಗೂ ಒಳಿತು ಬಯಸುವ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Advertisement
ಭದ್ರಾವತಿ: ನಮ್ಮ ವೀರಶೈವ ಲಿಂಗಾಯತ ಸಮಾಜ ಯಾವುದೇ ಸಮಾಜಕ್ಕೆ ಅನ್ಯಾಯ ಮಾಡುವುದಿಲ್ಲ, ಎಲ್ಲರಿಗೂ ಒಳಿತನ್ನು ಬಯಸುವ ಸಮಾಜ ನಮ್ಮದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿಪ್ರಾಯಪಟ್ಟರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಭದ್ರಾವತಿ ತಾಲೂಕು ಘಟಕದ ವತಿಯಿಂದ ಶ್ರೀ ಬಸವೇಶ್ವರ ಸಭಾ ಭವನದಲ್ಲಿ ನಡೆದ ಪ್ರತಿಭಾ ಪುರಸ್ಕಾರ, ಸಮಾಜದ ಹಿರಿಯರಿಗೆ ಗೌರವ ಮತ್ತು ಜನ ಪ್ರತಿನಿಧಿಗಳಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ದಾವಣಗೆರೆಯಲ್ಲಿ 2 ದಿನ ಪಂಚ ಪೀಠಾಧಿಪತಿಗಳು ಸೇರಿ ಅತ್ಯಂತ ಅರ್ಥಪೂರ್ಣವಾದ ಕಾರ್ಯಕ್ರಮಗಳನ್ನು ನಡೆಸಿ, ನಮ್ಮ ಸಮಾಜ ಗಟ್ಟಿಯಾಗಿದೆ, ನಮ್ಮ ಸಮಾಜ ಒಗ್ಗಟ್ಟಾಗಿದೆ ಎನ್ನುವ ಸಂದೇಶವನ್ನು ಇಡೀ ದೇಶಕ್ಕೆ ತೋರಿಸಿಕೊಟ್ಟಿದ್ದಾರೆ ಎಂದರು. ‌

ನಾನು ಯಾವತ್ತೂ ನಮ್ಮ ಸಮಾಜದ ಜೊತೆಗೆ ಇದ್ದೇನೆ, ಗುರುಗಳು ನೀಡುವ ಮಾರ್ಗದರ್ಶನದಂತೆ ನಡೆಯುತ್ತಿದ್ದೇನೆ, ಸಮಾಜಕ್ಕಾಗಿ ಎಲ್ಲ ರೀತಿಯ ಕೆಲಸ ಮಾಡಲು ಸದಾ ಸಿದ್ಧಳಿದ್ದೇನೆ. ನಾವೆಲ್ಲರೂ ಒಂದು ಎನ್ನುವ ತತ್ವದಲ್ಲಿ ನಂಬಿಕೆ ಇಟ್ಟುಕೊಂಡವರು ನಾವು ವೀರಶೈವ ಲಿಂಗಾಯತರು ಎಂದು ಹೇಳಿದರು.

* *ನಾವೆಂದು‌ ಅನ್ಯಾಯ ಸಹಿಸುವುದಿಲ್ಲ*
ವೀರಶೈವ ಲಿಂಗಾಯತ ಸಮಾಜದವರು ಅನ್ಯಾಯವನ್ನು ಎಂದೂ ಸಹಿಸುವುದಿಲ್ಲ.‌ ಪ್ರಸ್ತುತ ಜಾತಿ ಗಣತಿ ವಿಷಯದಲ್ಲಿ ಸಹ ನಮ್ಮ ಸಮಾಜಕ್ಕೆ ಅನ್ಯಾಯವಾಗಬಾರದೆನ್ನುವ ಕಾರಣಕ್ಕೆ ನಮ್ಮ ಸಮಾಜದ 7 ಮಂತ್ರಿಗಳು ಸೇರಿ ಲಿಖಿತವಾಗಿಯೇ ಅಭಿಪ್ರಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ತಿಳಿಸಿದೆವು. 10 ವರ್ಷಗಳ ಹಿಂದೆ ಮಾಡಿದ್ದ ಜಾತಿ ಗಣತಿ ಸೂಕ್ತ ರೀತಿಯಲ್ಲಿ ಇಲ್ಲದಿದ್ದ ಕಾರಣ ಇದೀಗ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ, ಸಮಸ್ಯೆಗಳ ಬಗ್ಗೆ ಸಂಪೂರ್ಣ ಹೊಸದಾಗಿ ಸಮೀಕ್ಷೆ ನಡೆಯುತ್ತಿದೆ. ಹಾಗಾಗಿ ನಮ್ಮ ಸಮಾಜಕ್ಕೆ ನಾವು ಅನ್ಯಾಯವಾಗಲು ಬಿಡುವುದಿಲ್ಲ, ಹಾಗೆಯೇ, ಬೇರೆ ಸಮಾಜಕ್ಕೂ ಅನ್ಯಾಯ ಆಗುವುದಕ್ಕೆ ಬಿಡುವುದಿಲ್ಲ ಎಂದು ಹೇಳಿದರು. ‌

ನಾವೆಲ್ಲರೂ ಒಂದು ಎನ್ನುವ ತತ್ವದಲ್ಲಿ ನಂಬಿಕೆ ಇಟ್ಟುಕೊಂಡವರು ನಾವು ವೀರಶೈವ ಲಿಂಗಾಯತ ಸಮಾಜದವರು. ಒಂದು ರೊಟ್ಟಿ ಯನ್ನು ಎಲ್ಲರಿಗೂ ಹಂಚಿ‌ ತಿನ್ನುವ ಮನೋಭಾವ ಹೊಂದಿರುವ ಸಮಾಜ ನಮ್ಮದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

* *ಬಸವ ತತ್ವದಡಿ ರಾಜ್ಯ ಸರ್ಕಾರ ಕಾರ್ಯ ನಿರ್ವಹಣೆ*
ಸಿದ್ದರಾಮಯ್ಯ ನವರ ನೇತೃತ್ವದ ರಾಜ್ಯ ಸರ್ಕಾರ ಬಸವ ತತ್ವಗಳನ್ನು ಅಳವಡಿಸಿಕೊಂಡು ಕಾರ್ಯ ನಿರ್ವಹಿಸುತ್ತಿದೆ. ಬಸವಣ್ಣನವರನ್ನು ರಾಜ್ಯ ಸರ್ಕಾರ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಮೂಲಕ ಬಸವ ತತ್ವಗಳನ್ನು ಅಳವಡಿಸಿಕೊಂಡಿದೆ. ಸಾಮಾಜಿಕ ನ್ಯಾಯ ನೀಡುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ ಎಂದರು‌.

* *ಸಮಾಜದ ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಬೇಕು*
ನಮ್ಮ ಸಮಾಜದ ಮಕ್ಕಳು ಕೇವಲ ಇಂಜಿನಿಯರಿಂಗ್, ವೈದ್ಯಕೀಯ ಪದವಿ ಪಡೆಯಬೇಕು ಎಂಬ ಮನೋಭಾವದಿಂದ ಹೊರಬಂದು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಬೇಕು. ಸಮಾಜದ ಹೆಚ್ಚು ಮಕ್ಕಳು ಐಎಎಸ್‌, ಐಪಿಎಸ್ ಅಧಿಕಾರಿಗಳಾಗಬೇಕು, ಇದೇ ನನ್ನ ಹೆಬ್ಬಯಕೆ ಹಾಗೂ ಹಾರೈಕೆ ಎಂದು ಕರೆ ನೀಡಿದರು.

ಇಲ್ಲಿ ಬಹಳ ಅರ್ಥಪೂರ್ಣ ಕಾರ್ಯಕ್ರಮವನ್ನು ನಮ್ಮ ವೀರಶೈವ ಲಿಂಗಾಯತ ಸಮಾಜದ ಭದ್ರಾವತಿ ತಾಲೂಕು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಪ್ರತಿಭಾ ಪುರಸ್ಕಾರ, ಸಾಧಕರಿಗೆ ಮತ್ತು ಹಿರಿಯರಿಗೆ ಸನ್ಮಾನ ಮಾಡುವುದಕ್ಕೆ ನಮ್ಮ ಹಿರಿಯರು ನಮಗೆ ಹಾಕಿಕೊಟ್ಟ ಪರಂಪರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬಾಳೆಹೊನ್ನೂರಿನ ಶ್ರೀಮದ್ ರಂಭಾಪುರಿ ವೀರ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ಡಾ. ವೀರ ಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದರು.

ಇದೇ ವೇಳೆ ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮೀಜಿಯವರು, ಬಿಳಿಕಿ ಹಿರೇಮಠದ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಭದ್ರಾವತಿ ತಾಲೂಕು ಘಟಕದ ಅಧ್ಯಕ್ಷ ಕೆ.ಎಸ್.ವಿಜಯ್ ಕುಮಾರ್, ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಅಣಬೇರು ರಾಜಣ್ಣ, ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ್ ಬಿದರಿ, ಭದ್ರಾವತಿ ಶಾಸಕ ಹಾಗೂ ಕೆ.ಆರ್.ಐ.ಡಿ.ಎಲ್ ಅಧ್ಯಕ್ಷ ಬಿ.ಕೆ.ಸಂಗಮೇಶ್ವರ, ಭದ್ರಾವತಿ ನಗರ ಸಭೆ ಅಧ್ಯಕ್ಷೆ ಗೀತಾ ರಾಜ್ ಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ರುದ್ರೇಗೌಡ ಸೇರಿದಂತೆ ಸಮಾಜದ ಹಲವು ಮುಖಂಡರು ಉಪಸ್ಥಿತರಿದ್ದರು.

 

ಕವಳೆವಾಡಿ ಶಾಲೆ ಹೆಚ್ಚುವರಿ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ

ಬೆಳಗಾವಿ : ಕವಳೆವಾಡಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 2 ಹೆಚ್ಚುವರಿ ಕೊಠಡಿಯ ನಿರ್ಮಾಣದ ಕಾಮಗಾರಿಗೆ ಯುವ ಮುಖಂಡ ಮೃಣಾಲ ಹೆಬ್ಬಾಳಕರ್, ಸ್ಥಳೀಯ ಜನ ಪ್ರತಿನಿಧಿಗಳೊಂದಿಗೆ ಸೇರಿ ಭೂಮಿ‌ ಪೂಜೆ ನೆರವೇರಿಸಿ, ಚಾಲನೆ ನೀಡಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶಷ ಪ್ರಯತ್ನದ ಫಲವಾಗಿ ಸುಮಾರು 31.79 ಲಕ್ಷ ರೂ. ಮಂಜೂರಾಗಿದ್ದು, 2 ಕೊಠಡಿಗಳು ನಿರ್ಮಾಣಗೊಳ್ಳಲಿವೆ. ಮಕ್ಕಳ ಕಲಿಕೆಗೆ ಯಾವುದೇ ರೀತಿಯ ತೊಂದರೆಯಾಗಬಾರದೆನ್ನುವ ಕಾಳಜಿಯಿಂದ ಹೆಚ್ಚುವರಿ ಕೊಠಡಿ ಒದಗಿಸಲಾಗಿದೆ ಎಂದು ಮೃಣಾಲ ಹೆಬ್ಬಾಳಕರ್ ತಿಳಿಸಿದರು.

ಈ ವೇಳೆ ಯುವರಾಜ ಕದಂ, ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಖಾ ನಾಯ್ಕ್, ಉಪಾಧ್ಯಕ್ಷ ನಾಮದೇವ್ ಮೊರೆ, ಎಸ್.ಡಿ.ಎಂ.ಸಿ ಅಧ್ಯಕ್ಷ ರಾಜು ಬುರುಡ, ಉಪಾಧ್ಯಕ್ಷ ಮಲ್ಲಪ್ಪ ಮೊರೆ, ಶಶಿಕಾಂತ ಗಾವಡೆ, ಪ್ರವೀಣ ಮೊರೆ, ಜ್ಯೋತಿಬಾ ಮೊರೆ, ರಘುನಾಥ್ ಮೊರೆ, ಯಲ್ಲಪ್ಪ ಗಾವಡೆ, ಕೇದಾರಿ ಕಣಬರಕರ್, ಕಲ್ಲಪ್ಪ ಯಳ್ಳೂರಕರ್ ಉಪಸ್ಥಿತರಿದ್ದರು.

ಬೆಳವಟ್ಟಿ: ಅಂಬೇಡ್ಕರ್ ಭವನ, ಶಾಲಾ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ

ಬೆಳಗಾವಿ : ಬೆಳಗಾವಿ ಗ್ರಾಮೀಣ ವಿಧಾನಸಭೆ ಕ್ಷೇತ್ರದ ಬೆಳವಟ್ಟಿ ಗ್ರಾಮದಲ್ಲಿ ಸುಮಾರು 25 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಉಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ನಾಗರಿಕರು ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ನಾನೇಶ್ವರ್ ಚೌಗುಲೆ, ಉಪಾಧ್ಯಕ್ಷ ಮಯಾರಿ ಅರಗೊಡೆ, ಗ್ರಾಮ ಪಂಚಾಯತ್ ಅಧ್ಯಕ್ಷೆ ಮಹಾದೇವಿ ಪರಶುರಾಮ ಮೆದಾರ್, ಮುಖಂಡರಾದ ಮಧು ನಲವಡೆ, ನಿಶಾ ಚಂದಿಲಕರ್, ರಮೇಶ ಕಾಂಬಳೆ, ರಾಜು ಕಾಂಬಳೆ ಉಪಸ್ಥಿತರಿದ್ದರು.

ನಂತರ, ಬೆಳವಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 21.64 ಲಕ್ಷ ರೂ,ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ 1 ಹೆಚ್ಚುವರಿ ಕೊಠಡಿಯ ಕಾಮಗಾರಿಗೆ ಸಹ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಲಾಯಿತು.

ಡಿ.ಡಿ.ಗುರವ್, ಎಸ್.ಡಿ.ಎಂ.ಸಿ ಅಧ್ಯಕ್ಷ ಡಿ.ಎನ್.ಚೌಗುಲೆ, ಉಪಾಧ್ಯಕ್ಷ ಮಯೂರಿ ಹರಗೊಡೆ, ಗ್ರಾಮ ಪಂಚಾಯತ್ ಅಧ್ಯಕ್ಷೆ ಮಹಾದೇವಿ ಮೇದಾರ್,ಉಪಾಧ್ಯಕ್ಷ ಬಾಬುರಾವ್ ಪಾಟೀಲ, ಮಧು ನಲವಡೆ, ನಾರಾಯಣ ನಲವಡೆ, ಆರ್.ಬಿ.ದೇಸಾಯಿ ಇದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ