Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸವದತ್ತಿ ಪಟ್ಟಣದಲ್ಲಿ ವಿಜಯ ಸಂಕಲ್ಪ ಅಭಿಯಾನ ಯಶಸ್ವಿ

 

ಸವದತ್ತಿ :
ಸವದತ್ತಿ ಪಟ್ಟಣದಲ್ಲಿ 27 ವಾರ್ಡ್ ಗಳು ಹಾಗೂ ಬೂತ್ ಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)ದ ವತಿಯಿಂದ ಬುಧವಾರ ನಡೆದ ವಿಜಯ ಸಂಕಲ್ಪ ಅಭಿಯಾನ ಯಶಸ್ವಿಗೊಂಡಿತು.

ಬೂತ್ ಮಜಬೂತ್ ಹೋಯತೋ ..ಹಮರಾ ವಿಜಯ ಗ್ಯಾರಂಟಿ...ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆಶಯವನ್ನು ಈಡೇರಿಸಲು ಕಾರ್ಯಕರ್ತರು ಸನ್ನದ್ಧರಾಗಿದ್ದಾರೆ.

ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು
ಮನೆ ಮನೆಗೆ ತೆರಳಿ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರದ ಭಿತ್ತಿ ಪತ್ರ, ಗೋಡೆ ಬರಹ, ಮನೆಯ ಗೋಡೆಗೆ ಬರಹ ಹಾಗೂ ವಾಹನಗಳಿಗೆ ಬಿಜೆಪಿಯ ಸಾಧನೆಗಳನ್ನು ಅಂಟಿಸಲಾಯಿತು.

ವಿಜಯ ಸಂಕಲ್ಪ ಅಭಿಯಾನ ಹಾಗೂ ಪಕ್ಷದ ಸಂಘಟನೆಯಲ್ಲಿ  ಅತ್ಯಂತ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ತಿಳಿಸಲಾಯಿತು.

ಸವದತ್ತಿ ಯಲ್ಲಮ್ಮ ವಿಧಾನ ಸಭಾ ಕ್ಷೇತ್ರ ದಲ್ಲಿ ಪ್ರತಿಯೊಂದು ಬೂತ್ ದಲ್ಲಿ ಬೂತ್ ಅಧ್ಯಕ್ಷರು ಸಕ್ರಿಯವಾಗಿ ಪೇಜ್ ಪ್ರಮುಖರನ್ನು ನೇಮಕ ಮಾಡಿ ವಿಧಾನಸಭಾ ಚುನಾವಣೆಗೆ ಬಿಜೆಪಿಗೆ ಶಕ್ತಿ ತುಂಬಬೇಕು ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರುದ್ರಣ್ಣ ಚಂದರಗಿ ತಿಳಿಸಿದರು.
ಸವದತ್ತಿ ವಿಧಾನಸಭಾ ಮತಕ್ಷೇತ್ರ ಬಿಜೆಪಿಯ ಭದ್ರಕೋಟೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಹೆಚ್ಚಿನ ಮತಗಳಿಂದ ಗೆಲ್ಲಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಅವರು ಸಲಹೆ ನೀಡಿದರು.

ಸವದತ್ತಿ ವಿಧಾನ ಸಭಾ ಕ್ಷೇತ್ರದ ವಿಸ್ತಾರಕರಾದ ಶಂಕರಗೌಡ ಪಾಟೀಲ ಅವರು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿ ಪಕ್ಷ ಬೂತ್ ಮಟ್ಟದಲ್ಲಿ ಇನ್ನಷ್ಟು ಕ್ರಿಯಾಶೀಲವಾಗಿ ಕೆಲಸ ಮಾಡಬೇಕು. ಬಿಜೆಪಿ ಸಿದ್ದಾಂತವನ್ನು ಪ್ರತಿಯೊಬ್ಬ ಕಾರ್ಯಕರ್ತರು ಜನತೆಗೆ ಮನವರಿಕೆ ಮಾಡಬೇಕು ಎಂದು ತಿಳಿಸಿದರು.

ಎಲ್ಲಾ ಅಪೇಕ್ಷಿತರನ್ನು ಮತ್ತು ಹಿರಿಯ ಪಕ್ಷದ ಮುಖಂಡರನ್ನು ಒಗ್ಗೂಡಿಸಿಕೊಂಡು ಸವದತ್ತಿ ಮತಕ್ಷೇತ್ರದ ವಿಸ್ತಾರಕರಾದ ಶಂಕರಗೌಡ ಪಾಟೀಲ ಮತ್ತು ಮಂಡಲ ಅಧ್ಯಕ್ಷರಾದ ಚಂದ್ರಗಿ ಇವರಿಬ್ಬರು ಕೆಲಸದಲ್ಲಿ ಅತ್ಯಂತ ಶ್ರಮವಹಿಸಿ ಸಂಘಟನೆಯಲ್ಲಿ ತೊಡಗಿದ್ದಾರೆ.

ಬಿಜೆಪಿ ಸವದತ್ತಿ ಮಂಡಳ ಅಧ್ಯಕ್ಷ ಈರಣ್ಣ ಚಂದರಗಿ, ಜಿಲ್ಲಾ ಉಪಾಧ್ಯಕ್ಷ ರುದ್ರಣ್ಣ ಚಂದರಗಿ, ರತ್ನಕ್ಕಾ ಮಾಮನಿ, ವಿರುಪಾಕ್ಷ ಮಾಮನಿ, ಅಜಿತ ದೇಸಾಯಿ, ರಾಜು ಸಾಲಿಮಠ, ನಯನಾ ಭಸ್ಮೆ, ಬಿಜೆಪಿ ಹಿರಿಯ ಮುಖಂಡರು, ಯುವ ಮೋರ್ಚಾ ಕಾರ್ಯಕರ್ತರು , ಮಹಿಳಾ ಮೋರ್ಚಾ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ