Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರನ ಸಹಚರರಿಂದ ಹಲ್ಲೆ: ವಿಜಯೇಂದ್ರ

 

ಬೆಂಗಳೂರು:
ಬಿಜೆಪಿ ಎಸ್‍ಸಿ ಮೋರ್ಚಾದ ಮುಖಂಡ ಪೃಥ್ವಿ ಸಿಂಗ್ ಅವರ ಮೇಲೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಹಾಗೂ ಎಂಎಲ್‍ಸಿ ಚನ್ನರಾಜ್ ಹಟ್ಟಿಹೊಳಿ ಅವರ ಗನ್‍ಮ್ಯಾನ್ ಮತ್ತು ಸಹಚರರು ಗಂಭೀರ ಹಲ್ಲೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.

ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದಲಿತ ಮುಖಂಡ, ಬಿಜೆಪಿ ಎಸ್‍ಸಿ ಮೋರ್ಚಾದ ಮುಖಂಡ ಪೃಥ್ವಿ ಸಿಂಗ್ ಅವರ ಮನೆಯ ಬಳಿ ಹಲ್ಲೆ ನಡೆದಿದೆ. ಈ ಸಂಬಂಧ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸಹೋದರ, ಇತರ ಅಪರಾಧಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು. ಇವತ್ತು ರಾತ್ರಿಯೇ ಅವರನ್ನು ಬಂಧಿಸಿ ಎಂದು ಒತ್ತಾಯಿಸಿದರು.
ಇಲ್ಲಿನ ಪೊಲೀಸ್ ವ್ಯವಸ್ಥೆ ಬಗ್ಗೆ ನಮಗೆ ವಿಶ್ವಾಸ ಇಲ್ಲ ಎಂದು ಪೃಥ್ವಿ ಸಿಂಗ್ ಹೇಳಿದ್ದಾರೆ. ಮನೆಯವರಿಗೆ ರಕ್ಷಣೆ ಕೊಡಿಸಿ ಎಂದು ಕೋರಿದ್ದಾರೆ. ಅಧಿಕಾರದ ದರ್ಪದಿಂದ ಸಚಿವರು, ಅವರ ಸಹೋದರ ನಡೆದುಕೊಂಡದ್ದನ್ನು ಬೆಳಗಾವಿಯ ಜನರು ನೋಡಿದ್ದಾರೆ ಎಂದರು.
ತಕ್ಷಣ ಎಫ್‍ಐಆರ್ ಮಾಡಿ ಅಪರಾಧಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

ಈ ಘಟನೆಯನ್ನು ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸಬೇಕು. ಎಲ್ಲ ದುಷ್ಟರನ್ನು ಬಂಧಿಸಬೇಕು ಎಂದು ತಿಳಿಸಿದರು. ಪೊಲೀಸರ ಕುರಿತು ನಮಗೆ ವಿಶ್ವಾಸ ಇಲ್ಲ ಎಂದು ಪುನರುಚ್ಚರಿಸಿದರು.

ಯಾವ ಕಾರಣಕ್ಕಾಗಿ ಹೀಗಾಗಿದೆ ಎಂಬ ಪ್ರಶ್ನೆ ಇದಲ್ಲ. ಆಡಳಿತ ಪಕ್ಷದ ವಿಧಾನಪರಿಷತ್ ಸದಸ್ಯ, ಹಾಲಿ ಸಚಿವರ ಸಹೋದರನಿಂದ ಮಾರಣಾಂತಿಕ ಹಲ್ಲೆ ನಡೆದರೆ ಹೇಗೆ ಎಂದು ಅವರು ಪ್ರಶ್ನಿಸಿದರು. ಕಲಬುರಗಿಯಲ್ಲೂ ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ್ ಮೇಲೆ ಹಲ್ಲೆ ನಡೆದಿತ್ತು. ಇಂಥ ಘಟನೆ ಇಲ್ಲಿ ಮರುಕಳಿಸಿದೆ ಎಂದು ಆಕ್ಷೇಪಿಸಿದರು. ಎಂಎಲ್‍ಸಿ ಮತ್ತು ಅವರ ಸಹಚರರನ್ನು ಕೂಡಲೇ ಬಂಧಿಸಿ ಎಂದು ಆಗ್ರಹಿಸಿದರು.

ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ಹುಡುಗಾಟ ಮಾಡುವ ವಿಚಾರ ಇದಲ್ಲ. ಪರಿಸ್ಥಿತಿ ವಿಕೋಪಕ್ಕೆ ಹೋಗುವ ಮುನ್ನ ಚೂರಿ ಇರಿತ ಮಾಡಿದವರನ್ನು ಬಂಧಿಸಿ ಎಂದು ಎಚ್ಚರಿಸಿದರು. ಆಡಳಿತ ಪಕ್ಷದ ಸದಸ್ಯರ ನಡವಳಿಕೆ ಈ ಮಟ್ಟಕ್ಕೆ ಹೋದರೆ ಹೇಗೆ ಎಂದು ಕೇಳಿದರು. ಇಲ್ಲಿ ಅಧಿವೇಶನ ನಡೆದಿದೆ. ಅದೇ ಸಂದರ್ಭದಲ್ಲಿ ಜವಾಬ್ದಾರಿಯುತ ಸಚಿವರು ಈ ರೀತಿ ಹೇಳಿಕೆ ಕೊಡುವುದು ಸರಿಯೇ ಎಂದು ಕೇಳಿದರು.
ಹಾಡಹಗಲೇ ಚೂರಿ ಇರಿತ ಮಾಡಿದವರನ್ನು ಬಂಧಿಸದೆ ಇರುವುದನ್ನು ಅವರು ಖಂಡಿಸಿದರು.

ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಮತ್ತು ಪಕ್ಷದ ಮುಖಂಡರು ಇದ್ದರು. ಇದಕ್ಕೂ ಮೊದಲು ವಿಜಯೇಂದ್ರ ಅವರು ಪೃಥ್ವಿ ಸಿಂಗ್ ಅವರು ಚಿಕಿತ್ಸೆ ಪಡೆಯುತ್ತಿರುವ ಖಾಸಗಿ ಆಸ್ಪತ್ರೆಗೆ ಭೇಟಿ ಕೊಟ್ಟರು.
ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಈ ರೀತಿ ಹಲ್ಲೆ ಮಾಡುವುದು ಸರಿಯಲ್ಲ. ಚುನಾವಣೆ ಬರುತ್ತದೆ; ಹೋಗುತ್ತದೆ. ಸಹೋದರತ್ವವನ್ನು ಕಳಕೊಳ್ಳಬಾರದು ಎಂದು ತಿಳಿಸಿದರು. ಜಿದ್ದು ಶಮನಕ್ಕೆ ಪ್ರಯತ್ನ ಮಾಡಬೇಕಿತ್ತು. ಚುನಾವಣೆ ನಂತರ ಕಾಫಿ ಕುಡಿದು ಎದ್ದು ಹೋಗಬೇಕು ಎಂದು ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ