Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಎಂ. ಕೆ. ಹೆಗಡೆಗೆ ವಿಪ್ರಶ್ರೀ ಪ್ರಶಸ್ತಿ

 

ಬೆಳಗಾವಿ :                                                   ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸಾಧಕರಿಗೆ ಕೊಡಮಾಡುವ ವಿಪ್ರಶ್ರೀ ಪ್ರಶಸ್ತಿಗೆ ಪ್ರಗತಿ ವಾಹಿನಿ ವೆಬ್ ನ್ಯೂಸ್ ಪ್ರಧಾನ ಸಂಪಾದಕ ಹಾಗೂ ಪ್ರಗತಿ ಮೀಡಿಯಾ ಹೌಸ್ ಸಂಸ್ಥಾಪಕ, ಹಿರಿಯ ಪತ್ರಕರ್ತ ಎಂ.ಕೆ. ಹೆಗಡೆ ಭಾಜನರಾಗಿದ್ದಾರೆ.

ಭಾನುವಾರ ಬೆಳಗಾವಿಯ ಸಿಟಿ ಹಾಲ್‌ನಲ್ಲಿ ನಡೆದ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಸಮಾರಂಭದಲ್ಲಿ ಮಂಡಳಿಯ ಅಧ್ಯಕ್ಷ ಎಚ್. ಎಸ್. ಸಚ್ಚಿದಾನಂದಮೂರ್ತಿ ಹಾಗೂ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ್ ಪ್ರಶಸ್ತಿ ಪ್ರದಾನ ಮಾಡಿದರು. ಬೆಳಗಾವಿ ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಎಸ್. ಎಂ. ಕುಲಕರ್ಣಿ,ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಹಲವು ನಿರ್ದೇಶಕರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಮೂಲತಃ ಶಿರಸಿ ತಾಲೂಕಿನ ಕಲ್ಮನೆಯವರಾದ ಎಂ.ಕೆ. ಹೆಗಡೆ ಕಳೆದ 28 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕನ್ನಡ ಜನಾಂತರಂಗ ಪತ್ರಿಕೆಯ ಹಿರಿಯ ವರದಿಗಾರರಾಗಿ, ಬೆಳಗಾವಿಯಲ್ಲಿ ಕನ್ನಡ ಪ್ರಭ ಪತ್ರಿಕೆಯ ಪ್ರಧಾನ ವರದಿಗಾರಾಗಿ, ವಿಜಯವಾಣಿ ಪತ್ರಿಕೆಯ ಬೆಳಗಾವಿ ಸ್ಥಾನಿಕ ಸಂಪಾದಕರಾಗಿ, ವಿಜಯ ಕರ್ನಾಟಕದ ಸೀನಿಯರ್ ಅಸಿಸ್ಟಂಟ್ ಎಡಿಟರ್ ಆಗಿ, ಬೆಳಗಾವಿ ಆವೃತ್ತಿಯ ಸ್ಥಾನಿಕ ಸಂಪಾದಕರಾಗಿ ಕಾರ್ಯ ನಿರ್ವಹಿದ್ದಾರೆ. ಸಧ್ಯ ಪ್ರಗತಿವಾಹಿನಿ ಇ ಪೇಪರ್ ನಡೆಸುತ್ತಿದ್ದಾರೆ.

ಅವರಿಗೆ ಈಗಾಗಲೇ ಬೆಳಗಾವಿಯ ಸಾರ್ವಜನಿಕ ವಾಚನಾಲಯದಿಂದ ಕೊಡಮಾಡುವ ರಾಜಾಧ್ಯಕ್ಷ ಪ್ರಶಸ್ತಿ, ಸಿರಿಗನ್ನಡ ರಾಜ್ಯೋತ್ಸವ ಪ್ರಶಸ್ತಿ, ಇಂಡಿಯನ್ ಎಕ್ಸ್‌ಪ್ರೆಸ್ ಚೇರ್ಮನ್ಸ್ ಅವಾರ್ಡ್, ಟೈಮ್ಸ್ ಗ್ರೂಫ್ ಚೇರ್ಮನ್ಸ್ ಅವಾರ್ಡ್, ವಿವಿಧ ರೋಟರಿ ಸಂಸ್ಥೆಯ ಎಕ್ಸಲೆನ್ಸ್ ಅವಾರ್ಡ್ ಸೇರಿದಂತೆ ಹಲವು ಪ್ರಶಸ್ತಿಗಳು ಲಭಿಸಿವೆ.

೩ ಸಾವಿರಕ್ಕೂ ಹೆಚ್ಚು ವಿಶೇಷ ವರದಿಗಳನ್ನು ಬರೆದಿದ್ದು ಮಹದಾಯಿ ಕುರಿತ ಪುಸ್ತಕ ರಚಿಸಿದ್ದಾರೆ. ಎಂ.ಕೆ. ಹೆಗಡೆ ಅವರ ಪತ್ರಿಕೋದ್ಯಮದ ಸಾಧನೆಯನ್ನು ಪರಿಗಣಿಸಿ ವಿಪ್ರಶ್ರೀ ಪ್ರಶಸ್ತಿ ನೀಡಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ