Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜನಸಾಗರ ತುಂಬಿ ತುಳುಕಿದ್ದ ವಿಠ್ಠಲ ದೇವಸ್ಥಾನಕ್ಕೆ ಕೊನೆಗೂ ಬಂತು ನೀರು..!

[video width="352" height="640" mp4="https://janajeevala.com/wp-content/uploads/2023/07/VID-20230719-WA0130.mp4"][/video]

ಬೆಳಗಾವಿ :ಹಿಡಕಲ್ ಜಲಾಶಯದ ಹಿನ್ನೀರು ಕಡಿಮೆಯಾದ ಹಿನ್ನೆಲೆಯಲ್ಲಿ ಹುನ್ನೂರು ವಿಠ್ಠಲ ದೇವಸ್ಥಾನ ಈ ವರ್ಷ ಭಕ್ತರಿಗೆ ಕಾಣಿಸಿಕೊಂಡಿತ್ತು. ಆದರೆ, ಇದೀಗ ಸುರಿಯುತ್ತಿರುವ ಭಾರಿ ಮಳೆಯಿಂದ ಘಟಪ್ರಭಾ ನದಿಯಲ್ಲಿ ನೀರಿನ ಒಳಹರಿವು ಹೆಚ್ಚಳವಾಗಿದೆ. ಆದ್ದರಿಂದ ವಿಠ್ಠಲ ದೇವಸ್ಥಾನ ಮುಳುಗುವ ಹಂತದಲ್ಲಿದೆ.

ದಶಕಗಳಿಂದ ನೀರಿನಲ್ಲಿ ಮುಳುಗಿರುತ್ತಿದ್ದ ಹಿಡಕಲ್ ಜಲಾಶಯದಲ್ಲಿದ್ದ ವಿಠ್ಠಲ ದೇವಸ್ಥಾನ ಈ ವರ್ಷ ನೀರು ಖಾಲಿಯಾದ ಪರಿಣಾಮ ಕಾಣಿಸಿಕೊಂಡಿತ್ತು. ಇದರಿಂದ ಭಾರಿ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆಯುತ್ತಿದ್ದರು. ಆದರೆ ಇದೀಗ ದೇವಸ್ಥಾನದ ಪರಿಸರದಲ್ಲಿ ನೀರು ತುಂಬಿಕೊಂಡಿದೆ.

ಬೆಳಗಾವಿ ಜಿಲ್ಲೆಯಲ್ಲಿ ಈಗಾಗಲೇ ಬರದ ಛಾಯೇ ಆವರಿಸಿದೆ. ಜಿಲ್ಲೆಯ ಬಹುತೇಕ ನದಿಗಳು ಸಂಪೂರ್ಣ ಒಣಗಿಹೋಗಿವೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ ಸದ್ಯ ಸಂಪೂರ್ಣ ಖಾಲಿಯಾಗಿದೆ. ಹಿಡಕಲ್ ಜಲಾಶಯ ಡೆಡ್ ಸ್ಟೋರೇಜ್ ಹಂತಕ್ಕೆ ತಲುಪಿದೆ. ಹೀಗಾಗಿ ಡ್ಯಾಂನ ಹಿನ್ನೀರಿನಲ್ಲಿ ಮುಳುಗಡೆಯಾಗಿದ್ದ ಪುರಾತನ ದೇವಸ್ಥಾನವೊಂದು ದರ್ಶನಕ್ಕೆ ಮುಕ್ತವಾಗಿತ್ತು.

ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ವಿಠ್ಠಲ ದೇವಸ್ಥಾನವು ಭಕ್ತರ ದರ್ಶನಕ್ಕೆ ತೆರೆದುಕೊಂಡಿತ್ತು. ಕಳೆದ 12 ವರ್ಷಗಳ ಬಳಿಕ ಈ ದೇವಸ್ಥಾನವು ಸಂಪೂರ್ಣವಾಗಿ ಕಾಣಿಸಿಕೊಂಡಿದೆ. 1928 ರಲ್ಲಿ ಈ ದೇವಸ್ಥಾನವನ್ನು ನಿರ್ಮಾಣ ಮಾಡಲಾಗಿದೆ. ಆದರೆ, 1977ನೇ ಇಸವಿಯಲ್ಲಿ ಹಿಡಕಲ್ ಜಲಾಶಯ ನಿರ್ಮಾಣ ಮಾಡುವ ಸಂದರ್ಭದಲ್ಲಿ ವಿಠ್ಠಲ ದೇವಸ್ಥಾನವು ಸಂಪೂರ್ಣವಾಗಿ ಮುಳುಗಡೆಯಾಗಿತ್ತು. ಅದಾದ ಬಳಿಕ ಡ್ಯಾಂನಲ್ಲಿ ನೀರಿನ ಪ್ರಮಾಣ ಕಡಿಮೆ ಇದ್ದ ಸಂದರ್ಭಗಳಲ್ಲಿ ಮಾತ್ರ ಈ ದೇವಸ್ಥಾನ ಕಾಣ ಸಿಗುತ್ತದೆ.

ವರ್ಷದ 10 ತಿಂಗಳುಗಳು ಈ ದೇವಸ್ಥಾನವು ನೀರಿನಲ್ಲಿ ಮುಳುಗಡೆಯಾಗಿರುತ್ತದೆ. ಕೇವಲ ಎರಡು ತಿಂಗಳು ಮಾತ್ರ ದೂರದಿಂದ ನೋಡಿದರೆ ಅರ್ಧದಷ್ಟು ಮಾತ್ರ ಕಾಣಸಿಗುತ್ತದೆ. ವಿಠ್ಠಲ ದೇವಸ್ಥಾನವನ್ನು ಸಂಪೂರ್ಣ ಕಲ್ಲಿನಲ್ಲಿಯೇ ನಿರ್ಮಿಸಲಾಗಿದೆ. ಕಳೆದ 12 ವರ್ಷಗಳ ಹಿಂದೆ ಈ ದೇವಸ್ಥಾನವು ಕಂಡಿತ್ತು. ಹಿಡಕಲ್ ಡ್ಯಾಂ ಸಂಪೂರ್ಣ ಖಾಲಿಯಾಗಿದ್ದರಿಂದ ವಿಠ್ಠಲ ದೇವಸ್ಥಾನವನ್ನು ನೋಡಲು ಜನರು ತಂಡೋಪತಂಡವಾಗಿ ಆಗಮಿಸಿದ್ದರು. ದಿನನಿತ್ಯವೂ ಇಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬಂದು ದೇವರ ದರ್ಶನ ಪಡೆದುಕೊಳ್ಳುತ್ತಿದ್ದರು.

ಡ್ಯಾಂ ಖಾಲಿಯಾಗುತ್ತಿದ್ದಂತೆ ಬಹುತೇಕ ಕಡೆಗಳಲ್ಲಿ ಹಿನ್ನೀರಿನಲ್ಲಿ ಮುಚ್ಚಿಹೋಗಿದ್ದ ಪುರಾತನ ದೇವಸ್ಥಾನಗಳು ಪತ್ತೆಯಾಗುತ್ತಿವೆ. ಅದರಲ್ಲೂ ಹುನ್ನೂರಿನ ವಿಠ್ಠಲ ದೇವಸ್ಥಾನ ನೀರಿನಲ್ಲಿಯೇ ಇದ್ದರೂ ದೇವಸ್ಥಾನಕ್ಕೆ ಮಾತ್ರ ಒಂದಿಂಚೂ ಹಾನಿಯಾಗದೇ ಇರುವುದು ಆಶ್ಚರ್ಯಕರ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ