Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಾವು ಕೂಡ ಹನುಮನ ಭಕ್ತರೇ, ಮೋದಿ ಅವರು ನಮ್ಮ ವಿರುದ್ಧ ಟೀಕೆ ಮಾಡುವುದು ಬಿಟ್ಟು, ರಾಜ್ಯಕ್ಕೆ ನೀಡಿರುವ ಕೊಡುಗೆ ಏನು ಎಂದು ಹೇಳಲಿ: ಡಿ.ಕೆ ಶಿವಕುಮಾರ್

ನಾವು ಕೂಡ ಹನುಮನ ಭಕ್ತರೇ, ಮೋದಿ

ಬೆಂಗಳೂರು:                                                      ನಾವು ಕೂಡ ಹನುಮಂತನ ಭಕ್ತರು. ನಾವು ದಿನನಿತ್ಯ ಹನುಮ ಚಾಲೀಸ ಪಠಣೆ ಮಾಡುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ವಿರುದ್ಧ ಅನಗತ್ಯ ಟೀಕೆ ಮಾಡುವುದನ್ನು ಬಿಟ್ಟು, ಈ ರಾಜ್ಯಕ್ಕೆ ಡಬಲ್ ಇಂಜಿನ ಸರ್ಕಾರದ ಕೊಡುಗೆಗಳೇನು ಎಂಬುದನ್ನು ಹೇಳಲಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹರಿಹಾಯ್ದಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಉತ್ತರಿಸಿದ ಶಿವಕುಮಾರ್ ಅವರು ಹೇಳಿದಿಷ್ಟು; ‘ಮೋದಿ ಅವರು ಪ್ರಧಾನಮಂತ್ರಿಗಳು. ರಾಜ್ಯದಲ್ಲಿ ತಮ್ಮ ಸರ್ಕಾರ ಅಧಿಕಾರ ಕಳೆದುಕೊಳ್ಳುತ್ತಿದೆ ಎಂದು ನಮ್ಮ ವಿರುದ್ಧ ವಾಗ್ದಾಳಿ ಮಾಡುತ್ತಿದ್ದಾರೆ. ನಮ್ಮ ವಿರುದ್ಧ ಟೀಕೆ ಮಾಡುವುದನ್ನು ನಿಲ್ಲಿಸಿ ರಾಜ್ಯಕ್ಕೆ ಅವರು ನೀಡಿರುವ ಕೊಡುಗೆಗಳನ್ನು ಹೇಳಲಿ. ಮೇಕೆದಾಟು, ಮಹದಾಯಿ ಯೋಜನೆ ಆರಂಭಿಸಲು ಏನಾದರೂ ಕ್ರಮ ಕೈಗೊಂಡಿದ್ದಾರಾ? ಬಿಜೆಪಿಯ ತಾಣ ಎಂದು ಹೇಳಿಕೊಳ್ಳುವ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಉದ್ಯೋಗ ಸೃಷ್ಟಿಗೆ ಏನಾದರೂ ಕ್ರಮ ಕೈಗೊಂಡಿದ್ದಾರಾ? ಜಾಗತಿಕ ಬಂಡವಾಳ ಹೂಡಿಕೆಯಲ್ಲಿ ಯಾರಾದರೂ ಈ ಭಾಗದಲ್ಲಿ ಬಂಡವಾಳ ಹೂಡಿಕೆ ಮಾಡಿದರಾ? ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಹೇಳಿದಂತೆ 1 ಲಕ್ಷದವರೆಗೂ ಸಾಲ ಮನ್ನಾ ಮಾಡಿದ್ದಾರಾ? ಎಲ್ಲರ ಬ್ಯಾಂಕ್ ಖಾತೆಗೆ 15 ಲಕ್ಷ ನೀಡುತ್ತೇವೆ ಎಂದಿದ್ದರು ನೀಡಿದ್ದಾರಾ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಿದ್ದಾರಾ? ಅವರು ಕೊಟ್ಟ ಭರವಸೆಗಳೆಲ್ಲವೂ ಹುಸಿಯಾಗಿವೆ. ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದರು. ಈಗ ಅವರದೇ ಸರ್ಕಾರ ಭ್ರಷ್ಟಾಚಾರ ಮಾಡಿದ್ದು, ಈಗ ಅದರ ಬಗ್ಗೆ ಮಾತನಾಡುತ್ತಿದ್ದಾರಾ? ಭ್ರಷ್ಟಾಚಾರ ನಿಯಂತ್ರಿಸಲು ಕ್ರಮ ಕೈಗೊಂಡಿದ್ದಾರಾ? ಅವರದೇ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ ಶಾಸಕರ ವಿರುದ್ಧವೂ ಕ್ರಮ ಕೈಗೊಳ್ಳಲಿಲ್ಲ. ಅವರು ಮೌನಂ ಸಮ್ಮತಿ ಲಕ್ಷಣಂ ಎಂಬಂತೆ ಸರ್ಕಾರದ ಭ್ರಷ್ಟಾಚಾರವನ್ನು ಮೌನವಾಗಿದ್ದುಕೊಂಡು ಒಪ್ಪಿಕೊಂಡಿದ್ದಾರೆ. ಬಿಜೆಪಿ ಅವರಿಗೆ ನಮ್ಮ ಗ್ಯಾರಂಟಿ ಯೋಜನೆಗಳಿಂದ ಆತಂಕ ಎದುರಾಗಿದೆ. ರಾಜ್ಯದ ಜನರಿಗೆ 200 ಯುನಿಟ್ ಉಚಿತ, ಮನೆಯೊಡತಿಗೆ 2 ಸಾವಿರ ಖಚಿತ, ಅನ್ನಭಾಗ್ಯದಲ್ಲಿ 10 ಕೆ.ಜಿ ಅಕ್ಕಿ ನಿಶ್ಚಿತ. ಯುವಕರಿಗೆ ನಿರುದ್ಯೋಗ ಭತ್ಯೆ ಹಾಗೂ ಮಹಿಳೆಯರಿಗೆ ಸಾರ್ವಜನಿಕ ಬಸ್ ಗಳಲ್ಲಿ ಉಚಿತ ಪ್ರಯಾಣ ಜಾರಿ ಮಾಡುತ್ತೇವೆ. ಇವುಗಳನ್ನು ಅರಗಿಸಿಕೊಳ್ಳಲಾಗದೆ ಒಂದಲ್ಲಾ ಒಂದು ವಿಚಾರವಾಗಿ ಗೊಂದಲ ಮೂಡಿಸುತ್ತಿದ್ದಾರೆ. ಅವರು ಏನೇ ಮಾಡಿದರೂ ಕಾಂಗ್ರೆಸ್ ಪಕ್ಷ 141 ಸ್ಥಾನಗಳಲ್ಲಿ ಗೆಲವು ಸಾಧಿಸಿ ಅಧಿಕಾರಕ್ಕೆ ಬಂದೇ ಬರಲಿದೆ’ ಎಂದು ತಿರುಗೇಟು ನೀಡಿದರು.

ಇನ್ನು ಬಜರಂಗದಳ ನಿಷೇಧದ ವಿಚಾರವಾಗಿ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದ್ದು ಹೀಗೆ;
‘ನಾವು ಆಂಜನೇಯನ ಭಕ್ತರು. ನಾವು ಈ ರಾಜ್ಯದ ಶಾಂತಿಯ ತೋಟ ಕದಡಬಾರದು, ಇಲ್ಲಿನ ಸೌಹಾರ್ದತೆ ನಾಶವಾಗಬಾರದು. ಬಜರಂಗದಳಕ್ಕೂ ಹನುಮಂತನಿಗೂ ಏನು ಸಂಬಂಧವಿದೆ? ಹನುಮಂತನೇ ಬೇರೆ, ಬಜರಂಗದಳವೇ ಬೇರೆ. ಬಜರಂಗದಳ ಕೇವಲ ಒಂದು ಸಂಘಟನೆ. ಆಂಜನೇಯನ ಹೆಸರು ಇಟ್ಟುಕೊಂಡ ಮಾತ್ರಕ್ಕೆ ಅವರು ಹನುಮಂತನೇ? ಅವರು ಕಾನೂನು ವ್ಯವಸ್ಥೆ ದುರ್ಬಳಕೆ ಮಾಡುತ್ತಿದ್ದರು. ನೈತಿಕ ಪೊಲೀಸ್ ಗಿರಿ ಮೂಲಕ ಕಾನೂನು ಉಲ್ಲಂಘನೆ ಮಾಡುತ್ತಿದ್ದರು. ಅವರು ಕಾನೂನು ಸುವ್ಯವಸ್ಥೆಯೊಳಗೆ ಇರಬೇಕು ಎಂಬುದು ನಮ್ಮ ಉದ್ದೇಶ. ನಮ್ಮ ಪ್ರಣಾಳಿಕೆ ಅಂಶವನ್ನು ನೀವು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ.

ನಮ್ಮ ಅಂಶವನ್ನು ತಿರುಚಿ, ಉದ್ರೇಕಿಸಿ ಮಾಧ್ಯಮಗಳಲ್ಲಿ ಪ್ರಚಾರ ಪಡೆಯಲು ಬಿಜೆಪಿಯವರು ಮುಂದಾಗಿದ್ದಾರೆ. ನಾವು ಹನುಮಂತನ ಭಕ್ತರು. ರಾಮನ ತಂದೆ ದಶರಥ ಮಹರಾಜನ ದೇವಾಲಯ ಎಲ್ಲೂ ಇಲ್ಲ. ಆದರೆ ರಾಮನ ಭಂಟ ಹನುಮಂತನ ದೇವಾಲಯ ಎಲ್ಲಾ ಹಳ್ಳಿಗಳಲ್ಲೂ ಇದೆ. ಕಾರಣ ಆಂಜನೇಯ ಸೇವಕ. ನಾವು ಆಂಜನೇಯನ ಪ್ರವೃತ್ತಿಯವರು. ಬಜರಂಗದಳ ಎಂದು ಹೆಸರಿಟ್ಟುಕೊಂಡ ಮಾತ್ರಕ್ಕೆ ಆಂಜನೇಯ ಎಂದು ಹೇಳಲು ಸಾಧ್ಯವಿಲ್ಲ. ಬಿಜೆಪಿಯವರು ನಾನು ಬಜರಂಗಿ ಎಂದು ಆಂದೋಲನ ಮಾಡುವ ಮುನ್ನ, ರಾಜ್ಯದ ಜನರ ಹೊಟ್ಟೆಗೆ ಏನು ಕೊಟ್ಟಿದ್ದಾರೆ? ರಾಜ್ಯದ ಯುವಕರಿಗೆ ಎಷ್ಟು ಉದ್ಯೋಗ ಕೊಟ್ಟಿದ್ದಾರೆ. ರಾಜ್ಯಕ್ಕೆ ಎಷ್ಟು ಅನುದಾನ ನೀಡಿದ್ದಾರೆ? ಎಷ್ಟು ಬಂಡವಾಳ ಹೂಡಿಕೆ ತಂದಿದ್ದಾರೆ ಎಂದು ಹೇಳಲಿ. ಮೇಕೆದಾಟು ಯೋಜನೆಗಾಗಿ ಏನು ಮಾಡಿದ್ದಾರ? ಉದ್ಯೋಗ ಸೃಷ್ಟಿಗೆ ಯಾವ ನೀತಿ ತಂದಿದ್ದಾರೆ? ಕೋವಿಡ್ ಸಮಯದಲ್ಲಿನ ಹಗರಣಕ್ಕೆ ಉತ್ತರ ಏನು ಎಂದು ಹೇಳಲಿ. ಅವುಗಳನ್ನು ಹೇಳುವುದನ್ನು ಬಿಟ್ಟು ಜನರ ಗಮನ ಬೇರೆಡೆ ಸೆಳೆಯಲು ಇಂತಹ ಆಂದೋಲನ ಮಾಡುತ್ತಿದ್ದಾರೆ.

ನಾಳೆ ಸಂಜೆ ಹನುಮಾನ್ ಚಾಲೀಸ ಪಠಣೆಗೆ ಕೆಲವು ಸಂಘಟನೆಗಳ ಕರೆ ಬಗ್ಗೆ ಕೇಳಿದಾಗ, ‘ನಾವು ದಿನನಿತ್ಯ ಹನುಮ ಚಾಲೀಸ ಪಠಣೆ ಮಾಡುತ್ತೇವೆ. ಅವರು ಮಾತ್ರ ಹನುಮನ ಭಕ್ತರೇ? ನಾವು ಹನುಮನ ಭಕ್ತರಲ್ಲವೇ? ಹಿಂದೆ ಇದ್ದ ಆರ್ ಎಸ್ಎಸ್ ಬೇರೆ ಈಗಿರುವ ಆರ್ ಎಸ್ಎಸ್ ಬೇರೆ. ನಾವು ಸಮಾಜದಲ್ಲಿ ಶಾಂತಿ ಭಂಗ ಮಾಡುವ ಸಂಘಟನೆಗಳ ಬಗ್ಗೆ ಮಾತನಾಡಿದ್ದು, ಯಾವ ಸಂಘಟನೆಗಳು ಸಮಾಜದ ಶಾಂತಿಗೆ ಭಂಗ ಮಾಡುತ್ತವೆಯೋ ಅಂತಹ ಸಂಘಟನೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದೇವೆ’ ಎಂದು ಹೇಳಿದರು.

ಕಾಂಗ್ರೆಸ್ ಕರ್ನಾಟಕ ರಾಜ್ಯವನ್ನು ಎಟಿಎಂ ಮಾಡಿಕೊಂಡಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, ‘ಬಿಜೆಪಿಯವರು ರಾಜ್ಯವನ್ನು ಎಟಿಎಂ ಮಾಡಿಕೊಂಡಿದ್ದಾರೆ’ ಎಂದು ತಿಳಿಸಿದರು.

ಪ್ರಣಾಳಿಕೆ ಈ ಅಂಶ ಹಿಂಪಡೆಯುತ್ತೀರಾ ಎಂಬ ಪ್ರಶ್ನೆಗೆ, ‘ಪ್ರಧಾನಮಂತ್ರಿಗಳು ಹೊಸ ಕಥೆ ಎಣೆಯಲು ಪ್ರಯತ್ನಿಸುತ್ತಿದ್ದಾರೆ. ಈ ಅಂಶದ ಬಗ್ಗೆ ನೀವು ಯಾಕೆ ಹೆದರುತ್ತೀರಿ? ಜನ ತೀರ್ಮಾನ ಮಾಡುತ್ತೀರಿ. ಕುಂಬಳಕಾಯಿ ಕಳ್ಳ ಎಂದರೆ ನೀವು ಯಾಕೆ ಹೆಗಲು ಮುಟ್ಟಿಕೊಳ್ಳುತ್ತೀರಿ? ಶಿವಮೊಗ್ಗದಲ್ಲಿ ಬಿಜೆಪಿಯಲ್ಲಿದ್ದ ಮಾಜಿ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಏನು ಹೇಳಿದರು? ಶಿವಮೊಗ್ಗದಲ್ಲಿ ಕೋಮು ಸಂಘರ್ಷವನ್ನು ತಡೆಯುತ್ತೇನೆ ಎಂದು ಬೋರ್ಡ್ ಹಾಕಿಕೊಂಡರು. ಶಿವಮೊಗ್ಗದಲ್ಲಿ ಈಶ್ವರಪ್ಪ ಅವರಿಗೆ ಯಾಕೆ ಟಿಕೆಟ್ ನೀಡಲಿಲ್ಲ?’ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಮಧ್ಯೆ ಬಜರಂಗದಳ ನಿಷೇಧ ವಿಚಾರ ಪಕ್ಷಕ್ಕೆ ನಷ್ಟವಾಗುವುದಿಲ್ಲವೇ ಎಂಬ ಪ್ರಶ್ನೆಗೆ ‘ಇದರಿಂದ ಯಾವುದೇ ಡ್ಯಾಮೇಜ್ ಆಗುವುದಿಲ್ಲ. ನಾನು ಹಿಂದು. ನಾನು ರಾಮ ಹಾಗೂ ಹನುಮಂತನ ಭಕ್ತ. ಇಂದು ನಮ್ಮ ಪಕ್ಷದ ಪರವಾಗಿ ಪ್ರಚಾರ ಮಾಡಲು ಅಂಬೇಡ್ಕರ್ ಅವರ ಮೊಮ್ಮಗ ಆನಂದ್ ರಾಜ್ ಅಂಬೇಡ್ಕರ್ ಅವರು ಆಗಮಿಸಿದ್ದಾರೆ. ಅವರನ್ನು ನಾವು ಸ್ವಾಗತಿಸುತ್ತೇವೆ. ಅವರು ನಮಗೆ ಶಕ್ತಿ ತುಂಬಲು ಬಂದಿದ್ದಾರೆ’ ಎಂದು ತಿಳಿಸಿದರು.

ಬಿಜೆಪಿಯಿಂದ ಯಾತ್ರೆ ಮಾಡುವ ಬಗ್ಗೆ ಕೇಳಿದಾಗ, ‘ಅವರು ಎಷ್ಟು ದೂರ ಬೇಕಾದರೂ ನಡೆಯಲಿ. ಪೊಲೀಸರು, ಅಧಿಕಾರಿಗಳನ್ನು ಅವರಿಗೆ ಬೇಕಾದ ರೀತಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ ರೋಡ್ ಶೋ, ಹೆಲಿಕಾಪ್ಟರ್ ಪ್ರಯಾಣದಲ್ಲಿ ನಮ್ಮ ನಾಯಕರ ಪ್ರಯಾಣಕ್ಕೆ ಅಡ್ಡಿಪಡಿಸಿದ್ದಾರೆ. ಆದರೆ ಬಿಜೆಪಿ ನಾಯಕರ ಪ್ರಯಾಣಕ್ಕೆ ಯಾವುದೇ ಅಡ್ಡಿ ಇಲ್ಲವಾಗಿದೆ’ ಎಂದು ತಿಳಿಸಿದರು.

ರಾಹುಲ್ ಗಾಂಧಿ ಅವರು ಬೆಂಗಳೂರಿನಲ್ಲಿ ಪ್ರಚಾರ ಮಾಡುತ್ತಾರಾ ಎಂದು ಕೇಳಿದಾಗ, ‘ಮೇ 7,8ರಂದು ರಾಹುಲ್ ಗಾಂಧಿ ಅವರು ಬೆಂಗಳೂರಿನಲ್ಲಿ ಪ್ರಚಾರ ಮಾಡಲಿದ್ದಾರೆ’ ಎಂದು ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ