Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಆ 30 ನಿಮಿಷದ ಭೇಟಿಯ ವೇಳೆ ಜಾರಕಿಹೊಳಿ ವಿಜಯೇಂದ್ರರಿಗೆ ಹೇಳಿದ್ದೇನು ?

 

ಬೆಳಗಾವಿ :
ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬೆಂಗಳೂರಿನಲ್ಲಿ ಇಂದು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಬೆಂಗಳೂರು ಸದಾಶಿವನಗರದ ರಮೇಶ ಜಾರಕಿಹೊಳಿ ಅವರ ನಿವಾಸಕ್ಕೆ ತೆರಳಿದ ವಿಜಯೇಂದ್ರ ಅವರು ರಾಜ್ಯಾದ್ಯಂತ ಪಕ್ಷ ಸಂಘಟಿಸಲು ಸಹಕಾರ ನೀಡುವಂತೆ ಕೇಳಿಕೊಂಡರು.

ರಮೇಶ ಜಾರಕಿಹೊಳಿ ಅವರ ಭೇಟಿ ನಂತರ ಪತ್ರಕರ್ತರ ಜೊತೆ ಮಾತನಾಡಿದ ವಿಜಯೇಂದ್ರ ಅವರು, ಮಾನ್ಯ ಜಾರಕಿಹೊಳಿ ಅವರ ನಡೆ ಹಲವಾರು ರೀತಿಯಲ್ಲಿ ಅಗಾಗ ಚರ್ಚೆಗೊಳಗಾಗುತ್ತಿದೆ. ನಾನು ಬಿಜೆಪಿ ರಾಜ್ಯಾಧ್ಯಕ್ಷನಾದ ಮೇಲೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವುದು ನನ್ನ ಜವಾಬ್ದಾರಿಯಾಗಿದೆ. ಈ ಮಾತನ್ನು ನಾನು ಪದೇ ಪದೇ ಹೇಳುತ್ತಿದ್ದೇನೆ. ಜಾರಕಿಹೊಳಿಯವರು ತಮ್ಮ ನೋವನ್ನು ಇಂದಿನ ಭೇಟಿಯ 30 ನಿಮಿಷಗಳ ವೇಳೆ ತೋಡಿಕೊಂಡಿದ್ದಾರೆ. ಆದರೆ, ರಾಷ್ಟ್ರೀಯ ನಾಯಕರು ನನಗೆ ಜವಾಬ್ದಾರಿ ನೀಡಿ ಪಕ್ಷ ಕಟ್ಟಲು ಹೇಳಿರುವುದನ್ನು ಅವರಿಗೆ ವಿವರಿಸಿದೆ.

ಜಾರಕಿಹೊಳಿಯವರು ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವ ನಿಟ್ಟಿನಲ್ಲಿ ಪಕ್ಷಕ್ಕಾಗಿ ಕೆಲಸ ಮಾಡುವ ಭರವಸೆ ನೀಡಿರುವುದಾಗಿ ವಿಜಯೇಂದ್ರ ಸ್ಪಷ್ಟಪಡಿಸಿದರು.

ತಮ್ಮ ಸಣ್ಣ ಪುಟ್ಟ ನೋವು, ಅಸಮಾಧಾನಗಳನ್ನು ಜಾರಕಿಹೊಳಿ ಅವರು ಹೇಳಿಕೊಂಡಿದ್ದಾರೆ‌. ವರಿಷ್ಠರಿಗೆ ಸಂಬಂಧಿಸಿದ ಅಭಿಪ್ರಾಯಗಳನ್ನು ಹೇಳಿದ್ದಾರೆ. ನಾನು ಹೇಳಿದ ಮಾತುಗಳಿಂದ ಅವರಿಗೆ ಸಮಾಧಾನವಾಗಿದೆ ಎಂದುಕೊಂಡಿದ್ದೇನೆ ಎಂದರು.

ವಿಜಯೇಂದ್ರ-ಅಶೋಕ ಹೊಂದಾಣಿಕೆ ರಾಜಕಾರಣ ಮಾಡುವ ಕಾರಣಕ್ಕೆ ಅವರಿಗೆ ಸ್ಥಾನ ಸಿಕ್ಕಿದೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿಕೆ ಪ್ರತಿಕ್ರಿಯಸಲು ಬಯಸದ ವಿಜಯೇಂದ್ರ, ಪಕ್ಷದ ಹಿರಿಯರು ತಮ್ಮ ಭಾವನೆಗಳನ್ನು ಅವರದೇ ಧಾಟಿಯಲ್ಲಿ ಹೇಳುತ್ತಾರೆ. ಮಾತನಾಡುವುದೇ ಕೆಲಸವಲ್ಲ, ಕೆಲಸ ಮಾಡಿ ತೋರಿಸಬೇಕು ಎಂಬುದು ತಮ್ಮ ನಿಲುವು. ಎಲ್ಲರನ್ನೂ ಒಗ್ಗೂಡಿಸಿ ವರಿಷ್ಠರು ವಹಿಸಿದ ಕೆಲಸವನ್ನಷ್ಟೇ ಮಾಡುವುದು ತಮ್ಮ ಆದ್ಯತೆ ಎಂದು ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷರಾದ ನಂತರ ಬಿ.ವೈ.ವಿಜಯೇಂದ್ರ ಅವರು ಇದೀಗ ಪಕ್ಷದ ಹಿರಿಯ ನಾಯಕರನ್ನು ಭೇಟಿಯಾಗಿ ಪಕ್ಷ ಸಂಘಟನೆಗೆ ಮುಂದಾಗುತ್ತಿರುವುದು ಮುಂದಿನ ದಿನಗಳಲ್ಲಿ ಯಾವ ರೀತಿ ಫಲ ನೀಡುತ್ತದೆ ಕಾದುನೋಡಬೇಕಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ