Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಏನಿದು ಹಕೀಕತ್ ? Smart ಹಠಾತ್ತನೇ ರದ್ದುಗೊಂಡಿತು ಪತ್ರಿಕಾಗೋಷ್ಠಿ !

ಜನ ಜೀವಾಳ ಸರ್ಚ್ ಲೈಟ್  :ಬೆಳಗಾವಿ

ಬೆಳಗಾವಿ ಮಹಾನಗರ ಸ್ಮಾರ್ಟ್ ಸಿಟಿ ಯೋಜನೆಗೆ ಸಂಬಂಧಿಸಿದ ಮತ್ತೊಂದು ಪ್ರಹಸನ ರವಿವಾರ ನಡೆದಿದೆ. ಬೆಳಗಾವಿಯ ವಿಶ್ವೇಶ್ವರಯ್ಯ ನಗರ ಕಮಾಂಡ್ ಅಂಡ್ ಕಂಟ್ರೋಲ್ ಸೆಂಟರ್ ನಲ್ಲಿ ರವಿವಾರ ಸಂಜೆ ನಿಗದಿಪಡಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಕಾರಣಾಂತರಗಳಿಂದ ರದ್ದುಗೊಳಿಸಲಾಗಿದೆ ಎಂದು ಸ್ಮಾರ್ಟ್ ಸಿಟಿ ಅಧಿಕಾರಿಗಳು ನೀಡಿರುವ ಹೇಳಿಕೆ ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ವ್ಯವಹಾರ ಸಚಿವಾಲಯದ ವತಿಯಿಂದ ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿರುವ ಕಾಮಗಾರಿಗಳ ವೀಕ್ಷಣೆಗೆ ವಸತಿ ಮತ್ತು ನಗರಭಿವೃದ್ಧಿ ವ್ಯವಹಾರಗಳ ಸಚಿವಾಲಯದ ಎಡಿಜಿ (ಮೀಡಿಯಾ) ರಾಜೀವ ಜೈನ್ ಅವರ ನೇತೃತ್ವದಲ್ಲಿ ರಾಷ್ಟ್ರ ಮಟ್ಟದ ಪತ್ರಕರ್ತರ ತಂಡ ಆಗಮಿಸಿತ್ತು. ನಂತರ ಪತ್ರಿಕಾಗೋಷ್ಠಿ ನಡೆಸಲು ಮುಂದಾಗಿದ್ದರೂ ಕೊನೆಯ ಕ್ಷಣದಲ್ಲಿ ಅದು ರದ್ದುಗೊಂಡಿರುವುದು ಏಕೆ ಎಂಬ ಅನುಮಾನ ಎಲ್ಲರನ್ನು ಕಾಡುತ್ತಿದೆ.

ಬೆಳಗಾವಿಯಲ್ಲಿ ನಡೆದಿರುವ ಸ್ಮಾರ್ಟ್ ಸಿಟಿ ಕಾಮಗಾರಿಗೆ ಕೇಂದ್ರ ತಂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ, ಸಾರ್ವಜನಿಕರು ಬಹುದೊಡ್ಡ ಪ್ರಮಾಣದಲ್ಲಿ ಸ್ಮಾರ್ಟ್ ಸಿಟಿ ಕೇಂದ್ರ ತಂಡದ ಎದುರು ತಮ್ಮ ನೋವು-ಸಂಕಟಗಳನ್ನು ತೋಡಿಕೊಂಡಿದ್ದರಿಂದ ಸ್ಮಾರ್ಟ್ ಸಿಟಿ ತಂಡ ಆಯೋಜಿಸಿದ್ದ ಪತ್ರಿಕಾಗೋಷ್ಠಿಯನ್ನು ಮೊಟಕುಗೊಳಿಸಿದೆ.
ನಗರದಲ್ಲಿ ನಡೆದಿರುವ ಸ್ಮಾರ್ಟ್ ಸಿಟಿ ಕಾಮಗಾರಿ ಅವೈಜ್ಞಾನಿಕದಿಂದ ಕೂಡಿದೆ ಹಾಗೂ ಭ್ರಷ್ಟಾಚಾರ ಆರೋಪ ದೊಡ್ಡ ಮಟ್ಟದಲ್ಲಿ ನಾಗರಿಕರ ದೂರಿನ ಸುರಿಮಳೆಯನ್ನು ಕೇಂದ್ರ ತಂಡ ಕೇಳಬೇಕಾದ ಪ್ರಸಂಗ ಸೃಷ್ಟಿಯಾಯಿತು.

ನಗರದ ಬ್ಯಾಂಕ್ ಆಫ್ ಇಂಡಿಯಾದಿಂದ ಪಿಬಿ ರಸ್ತೆವರೆಗೆ ನಡೆದಿರುವ ಕಾಮಗಾರಿಯಿಂದ ಅನೇಕರು ಮನೆ ಕಳೆದುಕೊಳ್ಳಬೇಕಾದ ಪ್ರಸಂಗ ಎದುರಾಗಿದೆ. ಅವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ನ್ಯಾಯಾಲಯ ಈಗಾಗಲೇ ಆದೇಶಿಸಿದೆ. ಇದನ್ನು ನಾಗರಿಕರು ಕೇಂದ್ರ ತಂಡದ ಎದುರು ವಿವರಿಸಿದರು.

ಬೆಳಗಾವಿಯ ಸ್ಮಾರ್ಟ್ ಸಿಟಿ ಯೋಜನೆಯನ್ನು ಜಾರಿಗೊಳಿಸಿದ ಅಧಿಕಾರಿಗಳು ಹಾಗೂ ರಾಜಕಾರಣಿಗಳೇ ಇದಕ್ಕೆ ನೇರ ಹೊಣೆ ಎಂದು ನಾಗರಿಕರು ಹಾಗೂ ಸಾಮಾಜಿಕ ಕಾರ್ಯಕರ್ತರು ಆರೋಪ ಮಾಡಿದರು. ಇದರಿಂದ ವಿಚಲಿತಗೊಂಡ ಕೇಂದ್ರ ತಂಡ ಹೇಗಾದರೂ ಮಾಡಿ ಬೆಳಗಾವಿಯಿಂದ ಪಾರಾದರೆ ಸಾಕು ಎಂಬ ರೀತಿಯಲ್ಲಿ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ನಿಯೋಜಿಸಿದ ಪತ್ರಿಕಾಗೋಷ್ಠಿಯನ್ನೇ ರದ್ದುಗೊಳಿಸಿತು.

ಸ್ಮಾರ್ಟ್ ಸಿಟಿ ಕಾಮಗಾರಿಗೆ ವೀಕ್ಷಣೆಗೆ ಕೇಂದ್ರ ತಂಡವನ್ನು ಕರೆಸಿಕೊಂಡು ಬಿಜೆಪಿಗೆ ಮುಂದಿದ ಲೋಕಸಭಾ ಚುನಾವಣೆಯಲ್ಲಿ ಲಾಭ ತಂದು ಕೊಡುವ ನಿಟ್ಟಿನಲ್ಲಿ ವರದಿ ಪ್ರಕಟವಾಗಬೇಕು ಎಂಬ ನಿಟ್ಟಿನಲ್ಲಿ ಬಿಜೆಪಿ ವ್ಯವಸ್ಥಿತ ಯೋಜನೆ ಮೂಲಕ ತಂಡವನ್ನು ಕರೆಸಿಕೊಂಡಿತ್ತು. ಆದರೆ ಇದೀಗ ಸ್ಮಾರ್ಟ್ ಸಿಟಿ ನಾಗರಿಕರ ತೀವ್ರ ಆಕ್ಷೇಪಕ್ಕೆ ವಾಪಸ್ ಆಗಿರುವುದು ಬೆಳಗಾವಿ ಬಿಜೆಪಿ ಪಾಲಿಗೆ ದೊಡ್ಡ ಗರ್ವಭಂಗವಾದಂತಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ