Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಹುಲ್ ಗಾಂಧಿ ಕರ್ನಾಟಕದಿಂದ ಸ್ಪರ್ಧೆ ಮಾಡ್ತಾರಾ ?

 

ದೆಹಲಿ :
ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಸ್ಪರ್ಧೆ ಮಾಡಬೇಕು ಎಂಬ ಸಲಹೆ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಇದೀಗ ರಾಹುಲ್ ಗಾಂಧಿ ಕರ್ನಾಟಕದಿಂದ ಸ್ಪರ್ಧೆಗೆ ಮುಂದಾಗುತ್ತಾರಾ ಎಂಬ ಚರ್ಚೆ ಆರಂಭವಾಗಿದೆ

ಸ್ವತಃ ಕಾಂಗ್ರೆಸ್‌ನಲ್ಲೂ ರಾಹುಲ್‌ ಗಾಂಧಿ ಅವರನ್ನು ಈ ಬಾರಿ ಕೇರಳದ ಬದಲು ಕರ್ನಾಟಕದಿಂದ ಕಣಕ್ಕೆ ಇಳಿಸುವ ಕುರಿತು ಚರ್ಚೆ ನಡೆದಿದೆ ಎಂದು ಮಾತುಗಳು ಕೇಳಿಬರುತ್ತಿವೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ರಾಹುಲ್ ಗಾಂಧಿ ಕರ್ನಾಟಕದಿಂದ ಸ್ಪರ್ಧೆ ಮಾಡ ಬಯಸಿದರೆ ಅವರು ಯಾವ ಕ್ಷೇತ್ರದಿಂದ ಕಣಕ್ಕಿಳಿಯಬಹುದು. ದೇಶವಿಡೀ ಚುನಾವಣೆ ಪ್ರಚಾರ ಮಾಡಬೇಕಿರುವ ಹಿನ್ನೆಲೆಯಲ್ಲಿ ಸುರಕ್ಷಿತ ಕ್ಷೇತ್ರವನ್ನೇ ಆಯ್ದುಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ತಮ್ಮ ಅಜ್ಜಿಗೆ ರಾಜಕೀಯ ಪುನರ್ಜನ್ಮ ದೊರಕಿಸಿಕೊಟ್ಟ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನೇ ಆಯ್ದುಕೊಳ್ಳುತ್ತಾರಾ ಎಂಬ ಚರ್ಚೆಯೂ ನಡೆದಿದೆ. ಜೊತೆಗೆ ಮೈಸೂರು, ಕಲಬುರ್ಗಿ ಮುಂತಾದ ಕ್ಷೇತ್ರಗಳಲ್ಲೂ ರಾಹುಲ್ ತಮ್ಮ ಸ್ಪರ್ಧೆಗೆ ಆಯ್ದುಕೊಳ್ಳಬಹುದು.

 

ಕಳೆದ ಚುನಾವಣೆಯಲ್ಲಿ ಕೇರಳದ ವಯನಾಡು ಕ್ಷೇತ್ರದಿಂದ ಸ್ಪರ್ಧಿಸಿ ಲೋಕಸಭೆಗೆ ಆಯ್ಕೆಯಾಗಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಈ ಬಾರಿ ನೆರೆಯ ಕರ್ನಾಟಕದಿಂದ ಕಣಕ್ಕೆ ಇಳಿಯಲಿದ್ದಾರೆಯೇ? ಇಂಥದ್ದೊಂದು ಸಲಹೆ ಇಂಡಿಯಾ ಮೈತ್ರಿಕೂಟದಿಂದ ಕೇಳಿಬಂದಿರುವುದರ ಜೊತೆಗೆ, ಸ್ವತಃ ಕಾಂಗ್ರೆಸ್‌ ವಲಯದಲ್ಲೂ ಅಂಥದ್ದೊಂದು ಮಾತುಗಳು ಕೇಳಿಬರುತ್ತಿವೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಕಳೆದ ವಾರವಷ್ಟೇ ವಯನಾಡಿಗೆ ಭೇಟಿ ನೀಡಿದ್ದ ರಾಹುಲ್‌, ‘ವಯನಾಡು ನನಗೆ ಮನೆ ಮತ್ತು ಕುಟುಂಬ ಇದ್ದಂತೆ’ ಎನ್ನುವ ಮೂಲಕ ಮತ್ತೆ ಅಲ್ಲೇ ಸ್ಪರ್ಧಿಸುವ ಸುಳಿವು ನೀಡಿದ್ದರು. ಆದರೆ ಭಾನುವಾರ ಪ್ರಕಟವಾದ ಪಂಚರಾಜ್ಯಗಳ ಚುನಾವಣೆಯಲ್ಲಿನ ಕಾಂಗ್ರೆಸ್‌ ಸೋಲು, ಕೇರಳದಿಂದ ರಾಹುಲ್‌ ಗಾಂಧಿ ಮರು ಸ್ಪರ್ಧೆಗೆ ವಿರೋಧ ವ್ಯಕ್ತವಾಗಲು ಕಾರಣವಾಗಿದೆ.

‘ನಾವು ಇಂಡಿಯಾ ಮೈತ್ರಿಕೂಟದ ಭಾಗವಾಗಿದ್ದೇವೆ. ಹೀಗಿರುವಾಗ ನಮ್ಮ ಪ್ರಾಬಲ್ಯ ಇರುವ ಕೇರಳದಲ್ಲೇ ರಾಹುಲ್‌ ಸ್ಪರ್ಧೆ ಮಾಡುವುದು ಸರಿಯಲ್ಲ. ಇಂಡಿಯಾ ಮೈತ್ರಿಕೂಟ ಹೋರಾಡುತ್ತಿರುವುದು ಬಿಜೆಪಿ ವಿರುದ್ಧ. ಹೀಗಾಗಿ ರಾಹುಲ್‌ ಕರ್ನಾಟಕ ಅಥವಾ ಬಿಜೆಪಿ ಶಕ್ತಿ ಹೆಚ್ಚಿರುವ ರಾಜ್ಯಗಳಲ್ಲಿ ಸ್ಪರ್ಧೆ ಮಾಡುವುದು ಸೂಕ್ತ’ ಎಂದು ಸಿಪಿಐ ಪ್ರದಾನ ಕಾರ್ಯದರ್ಶಿ ಡಿ.ರಾಜಾ, ಸಿಪಿಎಂ ಕೇರಳ ಘಟಕದ ಕಾರ್ಯದರ್ಶಿ ಎಂ.ವಿ.ಗೋವಿಂದನ್‌, ಕೇರಳದ ಸಚಿವ ಕೆ.ರಾಜನ್‌ ಮೊದಲಾದವರ ಬಹಿರಂಗವಾಗಿಯೇ ಸಲಹೆ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ‘ಮೈತ್ರಿಕೂಟದ ಅವಶ್ಯಕತೆ ಇಲ್ಲ ಎಂದಾದಲ್ಲಿ ಕೇರಳದಲ್ಲಿ ಎಲ್‌ಡಿಎಫ್‌, ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ತ್ರಿಕೋನ ಸ್ಪರ್ಧೆ ಏರ್ಪಡಲಿದೆ. ನಾವಂತೂ ವಯನಾಡಿನಲ್ಲಿ ಎಲ್‌ಡಿಎಫ್‌ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಿದ್ದೇವೆ. ರಾಹುಲ್‌ ಬಿಜೆಪಿ ವಿರುದ್ಧ ಹೋರಾಡಬೇಕೋ ಅಥವಾ ಎಲ್‌ಡಿಎಫ್‌ ವಿರುದ್ಧವೋ ಎಂಬುದನ್ನು ಸ್ವತಃ ಕಾಂಗ್ರೆಸ್‌ ನಿರ್ಧರಿಸಬೇಕು’ ಎಂದು ಸ್ಪಷ್ಟಪಡಿಸಿದ್ದಾರೆ.

 

ಇನ್ನೊಂದೆಡೆ, ‘ರಾಹುಲ್‌ ಗಾಂಧಿ ಬಿಜೆಪಿಯ ಬಲಪಂಥೀಯವಾದದ ವಿರುದ್ಧ ಹೋರಾಡಬೇಕೇ ವಿನಃ, ರಾಜಕೀಯ ಪಕ್ಷಗಳ ಅಂತಾರಾಜ್ಯ ದ್ವೇಷದ ವಿರುದ್ಧ ಅಲ್ಲ’ ಎಂದು ಸಿಪಿಎಂ ನಾಯಕ ಗೋವಿಂದನ್‌ ಸಲಹೆ ನೀಡಿದ್ದಾರೆ.
ಸಚಿವ ರಾಜನ್‌ ಮಾತನಾಡಿ ‘ರಾಹುಲ್‌ ದಕ್ಷಿಣದ ರಾಜ್ಯದಿಂದಲೇ ಸ್ಪರ್ಧಿಸುವ ಇರಾದೆ ಹೊಂದಿದ್ದರೆ ಕೇರಳದ ಬದಲು ಕರ್ನಾಟಕದಿಂದ ಕಣಕ್ಕೆ ಇಳಿಯಬೇಕು’ ಎಂದು ಸಲಹೆ ನೀಡಿದ್ದಾರೆ.

ರಾಹುಲ್ ಗಾಂಧಿ ಕರ್ನಾಟಕದಿಂದ ಸ್ಪರ್ಧೆಗೆ ಮುಂದಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಇಡೀ ಕಾಂಗ್ರೆಸ್ಸಿಗರ ದಂಡು ಅವರ ಜಯಕ್ಕೆ ಪ್ರಯತ್ನಿಸಬಹುದು. ಮಾತ್ರವಲ್ಲ ಶಕ್ತಿಮೀರಿ ತಮ್ಮ ನಾಯಕನಿಗೆ ಗೆಲುವು ತಂದುಕೊಡಲು ತಮ್ಮೆಲ್ಲ ಶಕ್ತಿಯನ್ನು ಧಾರೆ ಎರೆಯಬಹುದು. ಆದರೆ ಲೋಕಸಭಾ ಚುನಾವಣೆ ಮತ್ತು ವಿಧಾನಸಭಾ ಚುನಾವಣೆ ಬೇರೆ ಬೇರೆ. ಕಳೆದ ಬಾರಿ ಲೋಕಸಭಾ ಚುನಾವಣೆಗೆ ಇಡೀ ರಾಜ್ಯದಲ್ಲಿ ಬಿಜೆಪಿ ಜಯಭೇರಿ ಬಾರಿಸಿತ್ತು. ಈ ಹಿನ್ನೆಲೆಯಲ್ಲಿ ಈ ಸಲವು ಕಾಂಗ್ರೆಸ್ಸಿಗೆ ಕಬ್ಬಿಣದ ಕಡಲೆಯಾಗುವ ಸಾಧ್ಯತೆ ಇದೆ. ಈ ಎಲ್ಲಾ ಲೆಕ್ಕಾಚಾರಗಳನ್ನು ಕಾಂಗ್ರೆಸ್ ಹಾಕಿಯೇ ಅಂತಿಮವಾಗಿ ರಾಹುಲ್ ಗಾಂಧಿ ಸ್ಪರ್ಧೆಗೆ ಹಸಿರು ನಿಶಾನೆ ತೋರಿಸಬಹುದು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ