Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಾಳೆ ಸಿದ್ದರಾಮಯ್ಯ ರಾಜೀನಾಮೆ ?

ಬೆಂಗಳೂರು : ಮಂಗಳವಾರ ನಡೆದ ಕ್ಷಿಪ್ರ

ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರದ ನಾಯಕತ್ವ ಬದಲಾಯಿಸಲು ಕಾಂಗ್ರೆಸ್ ಹೈಕಮಾಂಡ್ ಮಹತ್ವದ ತೀರ್ಮಾನ ಕೈಗೊಂಡಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ಸಿದ್ದರಾಮಯ್ಯ ಅವರಿಗೆ ಸೂಚಿಸಿದೆ.

ಸಿಎಂ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡುವಂತೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಸೂಚಿಸಿದ್ದಾರೆ ಎಂಬ ವದಂತಿಗಳು ರಾಜಕೀಯ ವಲಯದಲ್ಲಿ ಹರಡಿದೆ. 'ಪಕ್ಷ ಈಗಾಗಲೇ ನಿಮಗೆ ಅವಕಾಶ ನೀಡಿದ್ದು, ವಿಪಕ್ಷ ನಾಯಕರಾಗಿದ್ದೀರಿ, ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೀರಿ. ಈಗ ಬೇರೆಯವರಿಗೆ ಅವಕಾಶ ನೀಡುವ ಸಮಯ ಬಂದಿದೆ'. ರಾಜ್ಯಸಭಾ ಸದಸ್ಯರಾಗುವ ಆಫರ್ ನ್ನು ಸಹ ರಾಹುಲ್ ನೀಡಿದ್ದಾರೆ.

ಸಿದ್ದರಾಮಯ್ಯ ಗುರುವಾರ ಬೆಳಗ್ಗೆ ಎಲ್ಲ ಸಚಿವರೊಂದಿಗೆ ಉಪಾಹಾರ ಕೂಟ ಆಯೋಜಿಸಿದ್ದು, ಬಳಿಕ ಮಹತ್ವದ ಬೆಳವಣಿಗೆ ನಡೆಯಲಿದೆ.

ದೆಹಲಿಯಲ್ಲಿ ಇಡೀ ದಿನ ನಡೆದ ಸರಣಿ ಸಭೆಯ ಬಳಿಕ ಹೈಕಮಾಂಡ್ ಈ ತೀರ್ಮಾನ ಕೈಗೊಂಡಿದೆ ಎಂದು ಗೊತ್ತಾಗಿದೆ. ರಾತ್ರಿ ಎಂಟೂವರೆಗೆ ವಿಶೇಷ ವಿಮಾನದಲ್ಲಿ ಹೊರಟ ಸಿದ್ದರಾಮಯ್ಯ ಅವರು 11ರ ಸುಮಾರಿಗೆ ಬೆಂಗಳೂರಿಗೆ ತಲುಪಿದರು. ಮೇ 28 ರಂದು ಅವರು ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸುವ ಸಂಭವ ಇದೆ ಎಂದು ಗೊತ್ತಾಗಿದೆ.

ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡೂವರೆ ವರ್ಷಗಳ ಬಳಿಕ ಅಧಿಕಾರ ಹಸ್ತಾಂತರದ ಒಪ್ಪಂದವಾಗಿತ್ತು ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಹರಿದಾಡಿದ್ದವು. ಅಧಿಕಾರಕ್ಕೆ ತ್ಯಾಗಕ್ಕೆ ಒಪ್ಪದ ಸಿದ್ದರಾಮಯ್ಯ ಅವರು, ತಮ್ಮದೇ ಚಾಣಾಕ್ಷ ನಡೆಯಿಂದ ತಮ್ಮ ಅಧಿಕಾರ ಅವಧಿಯನ್ನು ವಿಸ್ತರಿಸಿಕೊಂಡು ಬಂದಿದ್ದರು. ಕೊನೆಗೂ ಅವರನ್ನು ಕುರ್ಚಿಯಿಂದ ಇಳಿಸಲು ಹಾಗೂ ಪಕ್ಷ ಕಷ್ಟದಲ್ಲಿದ್ದಾಗ ಆಸರೆಯಾಗಿ ನಿಂತಿದ್ದ ಡಿ.ಕೆ. ಶಿವಕುಮಾರ್ ಅವರಿಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧರಿಸಿದೆ.

ಹಾಗಿದ್ದರೂ, ಸಿದ್ದರಾಮಯ್ಯ ಅವರು ಪದತ್ಯಾಗ ಮಾಡಿದ ಬಳಿಕ ನಡೆಯಬಹುದಾದ ರಾಜಕೀಯ ವಿದ್ಯಮಾನ ಹಾಗೂ ಸ್ಥಿತ್ಯಂತರಗಳು ಸರ್ಕಾರದ ಮುಂದಿನ ನಾಯಕತ್ವ ಯಾರದ್ದು ಎಂಬುದನ್ನು ನಿರ್ಧರಿಸುವ ಸಾಧ್ಯತೆಯೂ ಇದೆ.

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇದೇ 20ಕ್ಕೆ ಮೂರು ವರ್ಷ ಪೂರೈಸಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜೋರಾದ ಗಾಳಿಮಳೆಯ ಮುನ್ಸೂಚನೆಮೊದಲು ಕೋಡಿಂಗ್ ಕೆಲಸ ಕಣ್ಮರೆ, ನಂತರ ಸಾಫ್ಟ್‌ವೇರ್ ಎಂಜಿನಿಯರಿಂಗ್ ಸರದಿ.. ಭವಿಷ್ಯದಲ್ಲಿ ಮಾನವ ಕೌಶಲ್ಯಗಳೇ ನಿರ್ಣಾಯಕ’ : ಆಂಥ್ರೋಪಿಕ್ ಸಿಇಒರಾಜ್ಯದ ಎಲ್ಲಾ ಉಪ ನೋಂದಣಿ ಕಚೇರಿಗಳು ಭಾನುವಾರವೂ ಕಾರ್ಯನಿರ್ವಹಣೆಮುಂದಿನ ಚುನಾವಣೆಗೆ ಈಗಲೇ ಸಿದ್ಧತೆ ಸಚಿವ ಸ್ಥಾನಕ್ಕಿಂತ ಸ್ವಾಭಿಮಾನ ಮುಖ್ಯ: ಅಶೋಕ ಪಟ್ಟಣಈ ಬಾರಿ 11 ದಿನಗಳ ವಿಜೃಂಭಣೆಯ ದಸರಾ: ಬರಗಾಲ ಕಾರಣಕ್ಕೆ ದಸರಾ ನಿಲ್ಲಿಸುವ, ಸರಳವಾಗಿ ಆಚರಿಸುವ ಪ್ರಶ್ನೆ ಇಲ್ಲ : ಸಿಎಂಅಪ್ರಾಪ್ತನಿಗೆ ಬೈಕ್ ಚಲಾಯಿಸಲು ಕೊಟ್ಟ ತಂದೆಗೆ ಬಿತ್ತು ದಂಡನೀರು ನುಗ್ಗಿ ಹಾವು ಸಾಕಣೆ ಕೇಂದ್ರಗಳಿಂದ ತಪ್ಪಿಸಿಕೊಂಡ 900ಕ್ಕೂ ಹೆಚ್ಚು ಹಾವುಗಳು ; ಕಚ್ಚಿದ್ದಕ್ಕೆ ಮಹಿಳೆ ಸಾವು, ಹಲವರಿಗೆ ಕಡಿತ25 ವರ್ಷದ ಹಿಂದಿನ ಸಾಲ ತೀರಿಸಲು ವಿಳಾಸ, ಮೊಬೈಲ್ ನಂಬರ್‌ ಇಲ್ಲದೆ ಸ್ನೇಹಿತನ ಹುಡುಕಿಕೊಂಡು ಕೇರಳದಿಂದ ತೆಲಂಗಾಣಕ್ಕೆ ಬಂದ ವ್ಯಕ್ತಿ…!ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ : ಏನಾಯ್ತು ಬೆಳವಣಿಗೆ ?ಜೀವನದಲ್ಲಿ ಉನ್ನತವಾದುದ್ದನ್ನು ಸಾಧಿಸಿ, ಹಿರಿಯರ ಮೇಲೆ ಅಪಾರ ಪ್ರೀತಿ-ಗೌರವ ಬೆಳೆಸಿಕೊಳ್ಳಲು ಡಾ. ಅಡಿವೆಪ್ಪ ಇಟಗಿ ಸಲಹೆ