Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜಗತ್ತಿನ ಮೊದಲ ಸಮಾಜವಾದಿ ಬಸವಣ್ಣ : ಪ್ರಾಚಾರ್ಯ ಡಾ. ಎಸ್. ಎಸ್. ತೇರದಾಳ

 

ಬೆಳಗಾವಿ
ನಗರದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ಮಹಾಮಾನವತವಾದಿ ಬಸವಣ್ಣನವರ ಜಯಂತಿಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಸ್. ಎಸ್. ತೇರದಾಳ ಅವರು ಜಗಜ್ಯೋತಿ ಬಸವಣ್ಣನವರ ಭಾವ ಚಿತ್ರಕ್ಕೆ ಪುಷ್ಪನಮನ ಮಾಡಿ ಮಾತನಾಡಿದರು. ಬಸವಣ್ಣನವರು ಹನ್ನೆರಡನೆಯ ಶತಮಾನದಲ್ಲಿ ಮಾಡಿದ ವಚನ ಚಳವಳಿ ಜಗತ್ತಿನ ಮನುಕುಲದ ಉದ್ಧಾರದ ಚಳವಳಿಗಳಲ್ಲಿ ಮಹತ್ವದ ಸ್ಥಾನವಿದೆ. ಬಸವಣ್ಣನವರು ದೀನ-ದಲಿತ-ನಿರ್ಗತಿಕರ, ಶೋಷಿತರ ಧ್ವನಿಯಾಗಿ ಅವರ ಬಾಳಿನಲ್ಲಿ ಬೆಳಕನ್ನು ತರಲು ತಮ್ಮ ಜೀವನವನ್ನು ಮುಡಿಪಿಟ್ಟರು. ಅವರೆಲ್ಲರಿಗೂ ಬದುಕಿನಲ್ಲಿ ಆಶಾಕಿರಣವನ್ನು ತುಂಬಿ ಆತ್ಮಾಭಿಮಾನದಿಂದ ಬದುಕುವಂತೆ ಮಾಡಿದರು. ಸಮಾಜದಲ್ಲಿ ಬೇರು ಬಿಟ್ಟಿರುವ ಅಸಮಾನತೆ, ಕಂದಾಚಾರಗಳ, ಅನಾಚಾರಗಳ ವಿರುದ್ಧ ಸಮರ ಸಾರಿದರು. ಜನಸಾಮಾನ್ಯರಲ್ಲಿ ಅವುಗಳ ಕುರಿತು ಅರಿವು ಮೂಡಿಸಿದರು. ಎಲ್ಲರಿಗೂ ಸಮಬಾಳು ಸಮಪಾಲು ಎಂಬ ತತ್ತ್ವವನ್ನು ಸಾರುವುದರ ಮೂಲಕ ಜಗತ್ತಿನ ಮೊದಲ ಸಮಾಜವಾದಿಯಾದರು. ಸ್ತ್ರೀಯರಿಗೆ ಸಮಾನತೆಯನ್ನು ತಂದು ಕೊಡುವುದರ ಮೂಲಕ ಸ್ತ್ರೀ ಸಮುದಾಯಕ್ಕೆ ಗೌರವ ತಂದುಕೊಟ್ಟರು. ಧರ್ಮ, ಸಾಮಾಜಿಕ, ಸಾಹಿತ್ಯ, ರಾಜಕೀಯ, ಆರ್ಥಿಕ ಕ್ಷೇತ್ರಗಳಲ್ಲಿ ಬದಲಾವಣೆಗೆ ಶ್ರೀಕಾರವನ್ನು ಬರೆದರು. ಸರ್ವಜೀವಿಗಳಲ್ಲಿಯೂ ದಯೆ ತೋರಬೇಕೆನ್ನುವ ಅವರ ತತ್ತ್ವಾದರ್ಶಗಳು, ಕಾಯಕ-ದಾಸೋಹ ಸಿದ್ಧಾಂತಗಳು ಮನುಕುಲದ ಉನ್ನತಿಗೆ ಬುನಾದಿಯಾಗಿವೆ ಎಂದರು.
ಡಾ. ಅರ್ಜುನ ಜಂಬಗಿ ನಿರೂಪಿಸಿದರು. ಡಾ. ಬಾಲಾಜಿ ಆಳಂದೆ ವಂದಿಸಿದರು. ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ