Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಯಲ್ಲಮ್ಮ ದೇವಿ ಜಾತ್ರೆ : ನಕಲಿ ವೈದ್ಯರ ಹಾವಳಿ ಬಲುಜೋರು !

 

 

ಜನಜೀವಾಳ ಸರ್ಚ್ ಲೈಟ್ ಬೆಳಗಾವಿ :
ದಕ್ಷಿಣ ಭಾರತದ ಪ್ರಸಿದ್ಧ ದೇವಿ ಆರಾಧನಾ ಸ್ಥಳವಾಗಿರುವ ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ದೇವಿಯ ಆರಾಧನಾ ಕ್ಷೇತ್ರದಲ್ಲೀಗ ನಕಲಿ ವೈದ್ಯರ ಹಾವಳಿ ತಾಂಡವಾಡುತ್ತಿದೆ. ಇದಕ್ಕೆ ಲಗಾಮು ಹಾಕುವವರು ಯಾರು ಎನ್ನುವುದು ಭಕ್ತರ ಪ್ರಶ್ನೆಯಾಗಿದೆ. ಬೆಳಗಾವಿ ಜಿಲ್ಲಾಡಳಿತ ಈ ಬಗ್ಗೆ ಗಮನಹರಿಸಿ ಭಕ್ತರ ಮೊರೆ ಆಲಿಸಬೇಕು ಎನ್ನುವುದು ಜನರ ಸದಾಶಯವಾಗಿದೆ.

ಸವದತ್ತಿ ಯಲ್ಲಮ್ಮ ದೇವಸ್ಥಾನದ ಬನದ ಹುಣ್ಣಿಮೆ ಹಾಗೂ ಭಾರತ ಹುಣ್ಣಿಮೆ ಜಾತ್ರೆಗೆ 25 ಲಕ್ಷಕ್ಕೂ ಅಧಿಕ ಭಕ್ತರು ಸೇರುತ್ತಾರೆ. ಇಷ್ಟು ಜನ ಸೇರುವ ಜಾತ್ರೆಗೆ ಸರಿಯಾದ ವೈದ್ಯಕೀಯ ಸೌಲಭ್ಯ ಇಲ್ಲದೆ ಇರುವುದು ನಕಲಿ ವೈದ್ಯರ ಹಾವಳಿಗೆ ಅವಕಾಶ ಮಾಡಿಕೊಟ್ಟಂತಾಗಿದೆ.
ಇಲ್ಲಿ ಮುಕ್ತವಾಗಿ ಕ್ಲಿನಿಕ್ ತೆರೆದು ಚಿಕಿತ್ಸೆ ನೀಡುತ್ತಿದ್ದಾರೆ. ನಕಲಿ ವೈದ್ಯರು ಹತ್ತಕ್ಕೂ ಹೆಚ್ಚು ಕ್ಲಿನಿಕ್ ಗಳನ್ನು ತೆರೆದಿದ್ದಾರೆ. ಇವು ರಾಜಾರೋಷವಾಗಿ ತಲೆಯೆತ್ತಿರುವುದು ಆಡಳಿತಕ್ಕೆ ಸವಾಲು ಹಾಕಿದಂತಿದೆ.

ಕಳೆದ ಒಂದು ವಾರದಿಂದ ಯಲ್ಲಮ್ಮ ಗುಡ್ಡದಲ್ಲಿ ಮೇಲೆದ್ದಿರುವ ಕ್ಲಿನಿಕ್ ಗಳನ್ನು ನೋಡಿಯೂ ನೋಡದಂತಿದ್ದಾರೆ ತಾಲೂಕು ಆರೋಗ್ಯ ಅಧಿಕಾರಿ ಮಹೇಶ ಚಿತ್ತರಗಿ. ಅವರು ಮಾತ್ರ ಇದಕ್ಕೂ ತಮಗೂ ಯಾವುದೇ ಸಂಬಂಧ ಇಲ್ಲ ಎನ್ನುವಂತೆ ಇದ್ದಾರೆ. ನಕಲಿ ವೈದ್ಯರು ರಾಜಾರೋಷವಾಗಿ ಕ್ಲಿನಿಕ್ ನಡೆಸುತ್ತಿದ್ದರೂ ಇದನ್ನು ತಡೆಗಟ್ಟಲು ವೈದ್ಯಾಧಿಕಾರಿಗಳು ವಿಫಲವಾಗಿದ್ದಾರೆ ಎನ್ನುವುದು ತಾಲೂಕಿನ ಜನತೆಯ ಆರೋಪವಾಗಿದೆ.

ಸವದತ್ತಿ ತಾಲೂಕಿನ ಆರೋಗ್ಯ ಅಧಿಕಾರಿ ಮಹೇಶ ಚಿತ್ತರಗಿ ಅವರ ಈ ನಡೆ ಜನರಲ್ಲಿ ಅನೇಕ ರೀತಿಯಲ್ಲಿ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಅವರು ನಕಲಿ ವೈದ್ಯರ ಜತೆಗೆ ಸೇರಿಕೊಂಡಿದ್ದಾರೆಯೇ ಎಂಬ ಅನುಮಾನವನ್ನು ಜನರೇ ವ್ಯಕ್ತಪಡಿಸುತ್ತಿದ್ದಾರೆ.

ಪ್ರಸಿದ್ಧ ಯಲ್ಲಮ್ಮ ದೇವಿ ಜಾತ್ರೆಯಲ್ಲಿ ತಲೆಯೆತ್ತಿರುವ ನಕಲಿ ವೈದ್ಯರ ಕ್ಲಿನಿಕ್ ಗಳ ಹಾವಳಿ ತಡೆಗಟ್ಟುವ ಕೆಲಸವನ್ನು ಅವರು ಮಾಡಬೇಕು ಎನ್ನುವುದು ತಾಲೂಕಿನ ಜನರ ಬೇಡಿಕೆಯಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ