Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಗೋಬ್ಯಾಕ್, ಆಕಾಂಕ್ಷಿಗಳನ್ನು ಸಮಾಧಾನಪಡಿಸಲು ದಿಢೀರ್ ಬೆಳಗಾವಿಗೆ ಆಗಮಿಸುತ್ತಿರುವ ಯಡಿಯೂರಪ್ಪ

ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ತಮಗೆ ಟಿಕೆಟ್ ನೀಡದೇ ಇರುವ ಹಿನ್ನೆಲೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿ ಜಗದೀಶ್ ಶೆಟ್ಟರ್ ಬಿಜೆಪಿ ತ್ಯಜಿಸಿದ್ದರು. ಆದರೆ, ತಿಂಗಳ ಹಿಂದೆ ನಡೆದ ಮಹತ್ತರ ಬೆಳವಣಿಗೆಯಲ್ಲಿ ಮತ್ತೆ ಅವರನ್ನು ಬಿಜೆಪಿಗೆ ಕರೆತರಲಾಗಿತ್ತು. ಆ ಸಂದರ್ಭದಲ್ಲೇ ಅವರಿಗೆ ಬೆಳಗಾವಿಯಿಂದ ಲೋಕಸಭೆಗೆ ಸ್ಪರ್ಧಿಸಲು ಸೂಚನೆ ನೀಡಲಾಗಿತ್ತು. ಆದರೆ ಬೆಳಗಾವಿಯ ಬಿಜೆಪಿ ಆಕಾಂಕ್ಷಿತರಷ್ಟೇ ಶೆಟ್ಟರ್ ಸ್ಪರ್ಧೆಗೆ ಆಕ್ಷೇಪಿಸಿದ್ದರೆ ಹೊರತು ಇಡೀ ಬೆಳಗಾವಿ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಅವರ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸಿರಲಿಲ್ಲ ಎನ್ನುವುದು ಇಲ್ಲಿ ಗಮನಿಸಬೇಕಾದ ಸಂಗತಿ.

ಬೆಳಗಾವಿ : ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಟಿಕೆಟ್ ನೀಡಿರುವ ವಿಚಾರದಲ್ಲಿ ಬೆಳಗಾವಿಯ ಸ್ಥಳೀಯ ಬಿಜೆಪಿ ನಾಯಕರು ನಡೆಸಿದ್ದ ಗೋ ಬ್ಯಾಕ್ ಚಳವಳಿ ಹಿನ್ನೆಲೆಯಲ್ಲಿ ಅವರನ್ನು ಸಮಾಧಾನಪಡಿಸಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಬೆಳಗಾವಿಗೆ ಆಗಮಿಸುತ್ತಿದ್ದಾರೆ.

ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಕಣಕ್ಕಿಳಿಯಲು ಬಯಸಿದ್ದ ಆಕಾಂಕ್ಷಿಗಳ ಭೇಟಿಯಾಗಲು ನಿರ್ಧರಿಸಿರುವ ಯಡಿಯೂರಪ್ಪ ಅವರು ಅವರೆಲ್ಲರ ಜೊತೆ ಮಾತುಕತೆ ನಡೆಸಿ ಸಮಾಧಾನಪಡಿಸಲಿದ್ದಾರೆ. ಬೆಳಗಾವಿಯ ಯುಕೆ 27 ಹೋಟೆಲ್ ನಲ್ಲಿ ಸಭೆ ನಿಗದಿಯಾಗಿದೆ. ಬೆಳಗಾವಿಯ ಬಿಜೆಪಿ ನಾಯಕರು ಈ ಮಹತ್ವದ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಯಡಿಯೂರಪ್ಪ ಇಂದು ರಾತ್ರಿ ಬೆಳಗಾವಿಗೆ ಆಗಮಿಸುವ ಕಾರ್ಯಕ್ರಮ ನಿಗದಿಯಾಗಿದ್ದು ಯಾವುದೇ ಭಿನ್ನಮತ ಸೃಷ್ಟಿ ಆಗದಂತೆ ನೋಡಿಕೊಳ್ಳಲು ನಾಯಕರಿಗೆ ಸೂಚಿಸಲಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ