Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮೋದಿ ನೇತೃತ್ವದಲ್ಲಿ ಯೋಗ ದಿನ

 

ವಿಶ್ವಸಂಸ್ಥೆ:
9ನೇ ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜೂನ್ 21ರಂದು ವಿಶ್ವಸಂಸ್ಥೆಯಲ್ಲಿ ನಡೆಯಲಿರುವ ಯೋಗ ಅಧಿವೇಶನದ ನೇತೃತ್ವವನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ವಹಿಸಲಿದ್ದಾರೆ.

ಅಂತರರಾಷ್ಟ್ರೀಯ ಯೋಗ ದಿನವನ್ನು ವಾರ್ಷಿಕ ಸಂಸ್ಮರಣೆಯಾಗಿ ಆಚರಿಸಲು ವಿಶ್ವಸಂಸ್ಥೆಯ ಮಹಾಸಭೆಯಲ್ಲಿ ಮೋದಿ ಪ್ರಸ್ತಾಪಿಸಿದ ಒಂಭತ್ತು ವರ್ಷಗಳ ಬಳಿಕ, ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಐತಿಹಾಸಿಕ ಸಂಸ್ಮರಣೆಯ ಯೋಗ ಅಧಿವೇಶನ ನಿಗದಿಯಾಗಿದೆ. ಇದರ ನೇತೃತ್ವವನ್ನು ಸ್ವತಃ ಮೋದಿ ಅವರೇ ವಹಿಸುತ್ತಿದ್ದಾರೆ.
ಜೂನ್ 21ರಂದು ಬೆಳಿಗ್ಗೆ 8ರಿಂದ 9ರವರೆಗೆ ಯೋಗ ಅಧಿವೇಶನ ವಿಶ್ವಸಂಸ್ಥೆಯ ಕೇಂದ್ರ ಕಚೇರಿಯ ಉತ್ತರದ ಹುಲ್ಲುಹಾಸಿನಲ್ಲಿ ನಡೆಯಲಿದೆ. ಕಳೆದ ಡಿಸೆಂಬರ್‌ನಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷತೆ ವಹಿಸಿರುವ ಭಾರತವು ವಿಶ್ವಸಂಸ್ಥೆಗೆ ಕೊಡುಗೆಯಾಗಿ ನೀಡಿರುವ ಮಹಾತ್ಮಾ ಗಾಂಧಿ ಅವರ ಪುತ್ಥಳಿಯನ್ನು ಅನಾವರಣಗೊಳಿಸಲಾಗುತ್ತದೆ.

ಯೋಗ ಸಮ್ಮೇಳನದಲ್ಲಿ ವಿಶ್ವಸಂಸ್ಥೆಯ ಉನ್ನತ ಅಧಿಕಾರಿಗಳು, ವಿವಿಧ ದೇಶಗಳ ರಾಯಭಾರಿಗಳು, ರಾಜತಾಂತ್ರಿಕರು, ಪ್ರತಿನಿಧಿಗಳು ಹಾಗೂ ಅನಿವಾಸಿಗರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

ವಿಶ್ವಸಂಸ್ಥೆಯಲ್ಲಿ ಮುಂದಿನ ವಾರ ನಡೆಯಲಿರುವ 9ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ನರೇಂದ್ರ ಮೋದಿ ಅವರೊಂದಿಗೆ ಭಾಗವಹಿಸಲು ಎದುರು ನೋಡುತ್ತಿದ್ದೇನೆ ಎಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 77ನೇ ಅಧಿವೇಶನದ ಅಧ್ಯಕ್ಷ ಸಬಾ ಕೊರೊಸಿ ಟ್ವೀಟ್ ಮಾಡಿದ್ದಾರೆ.

ಯೋಗಾಭ್ಯಾಸದಿಂದ ಆಗುವ ಪ್ರಯೋಜನಗಳ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸುವುದು ಅಂತರರಾಷ್ಟ್ರೀಯ ಯೋಗ ದಿನದ ಉದ್ದೇಶವಾಗಿದೆ. 2014ರ ಡಿಸೆಂಬರ್‌ನಲ್ಲಿ ವಿಶ್ವಸಂಸ್ಥೆಯು ಜೂನ್ 21 ಅನ್ನು ಅಂತರರಾಷ್ಟ್ರೀಯ ಯೋಗ ದಿನವೆಂದು ಘೋಷಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ