ಪಟ್ನಾ: ಬಿಹಾರದ ಬಿಜೆಪಿಯ ಮೊದಲ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಮಂಗಳವಾರ (ಏ.14) ತೆರೆ ಬಿಳಲಿದೆ. ಇದರ ಮಧ್ಯೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಏ.14ರಂದು ರಾಜೀನಾಮೆ ಸಲ್ಲಿಸಲು ತೀರ್ಮಾನಿಸಿರುವ ಹಿನ್ನೆಲೆ, ಬಿಜೆಪಿಯ ಮೊದಲ ಮುಖ್ಯಮಂತ್ರಿ ಆಯ್ಕೆಯಾಗುವ ಸಾಧ್ಯತೆ ಗಟ್ಟಿಯಾಗಿದೆ. ಪ್ರಸ್ತುತ ಉಪಮುಖ್ಯಮಂತ್ರಿಯಾಗಿರುವ ಸಾಮ್ರಾಟ್ ಚೌಧರಿ ಅವರ ಹೆಸರು ಸಿಎಂ ರೇಸ್ನಲ್ಲಿ ಮುಂಚೂಣಿಯಲ್ಲಿದೆ.
ಮಂಗಳವಾರ ಕೊನೆಯ ಸಚಿವ ಸಂಪುಟ ಸಭೆಯನ್ನು ಕರೆದಿರುವ ನಿತೀಶ್ ಕುಮಾರ್, ಬಳಿಕ ರಾಜ್ಯಪಾಲ, ನಿವೃತ್ತ ಲೆಫ್ಟಿನೆಂಟ್ ಜನರಲ್ ಸೈಯದ್ ಅತಾ ಹಸ್ನೈನ್ ಅವರಿಗೆ ರಾಜೀನಾಮೆ ಸಲ್ಲಿಸಲಿದ್ದಾರೆ. ಇದರಿಂದಾಗಿ, ಬಿಜೆಪಿ ನಾಯಕರೊಬ್ಬರು ಬಿಹಾರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ.
ಮುಖ್ಯಮಂತ್ರಿ ಸ್ಥಾನ: ಇಂದು ಘೋಷಣೆ ಸಾಧ್ಯತೆ
243 ಸದಸ್ಯ ಬಲದ ವಿಧಾನಸಭೆಯಲ್ಲಿ 89 ಶಾಸಕರನ್ನು ಹೊಂದಿರುವ ಬಿಜೆಪಿ, ಅತಿ ದೊಡ್ಡ ಪಕ್ಷವಾಗಿದೆ. 2005ರಿಂದ ನಿತೀಶ್ ನೇತೃತ್ವದ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನದಲ್ಲಿದ್ದ ಬಿಜೆಪಿ, ಇದೀಗ ಮೊದಲ ಬಾರಿಗೆ ಮುಖ್ಯಮಂತ್ರಿಯ ಹುದ್ದೆಯನ್ನು ಪಡೆಯಲಿರುವುದು ವಿಶೇಷ.
2025ರ ಚುನಾವಣೆಯಲ್ಲಿ 243 ಸದಸ್ಯರ 89 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ, ಬಿಹಾರ ವಿಧಾನಸಭೆಯಲ್ಲಿ ಮೊದಲ ಬಾರಿಗೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ನಿತೀಶ್ ಕುಮಾರ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನ ಹೊಂದಿದ್ದ ಬಿಜೆಪಿ, ರಾಜ್ಯದಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯ ಹುದ್ದೆಯನ್ನು ಪಡೆಯುತ್ತಿರುವುದು ವಿಶೇಷ.
2005ರಿಂದ ನಿತೀಶ್ ನೇತೃತ್ವದ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನದಲ್ಲಿದ್ದ ಬಿಜೆಪಿ, ಇದೀಗ ಮೊದಲ ಬಾರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಭರ್ತಿ ಮಾಡುತ್ತಿರುವುದು ವಿಶೇಷ.
ಹೊಸ ನಾಯಕನ ಆಯ್ಕೆಗೆ ಬಿಜೆಪಿ ಉನ್ನತ ನಾಯಕತ್ವವು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ವೀಕ್ಷಕರಾಗಿ ನೇಮಕ ಮಾಡಿದೆ. ಏಪ್ರಿಲ್ 14ರಂದು ನಡೆಯಲಿರುವ ಬಿಜೆಪಿ ಶಾಸಕರ ಸಭೆಯಲ್ಲಿ ಅವರು ಭಾಗವಹಿಸಲಿದ್ದು, ಅದೇ ದಿನ ಎನ್ಡಿಎ ಶಾಸಕರ ಸಭೆಯೂ ನಡೆಯಲಿದೆ. ಬಿಹಾರದಲ್ಲಿ ಜೆಡಿಯು, ಬಿಜೆಪಿ, ಎಲ್ಜೆಪಿ, ಎಚ್ಎಎಂ ಹಾಗೂ ಉಪೇಂದ್ರ ಕುಶ್ವಾಹಾ ಅವರ ಆರ್ಎಲ್ಪಿ ಪಕ್ಷಗಳು ಎನ್ಡಿಎ ಮೈತ್ರಿಯ ಭಾಗವಾಗಿವೆ. ಮೈತ್ರಿಕೂಟದಲ್ಲಿ ಯಾವುದೇ ಬದಲಾವಣೆ ಇಲ್ಲ. ಜೆಡಿಯು ನಾಯಕ ನಿತೀಶ್ ಅವರ ಬದಲು, ಬಿಜೆಪಿಯ ನಾಯಕ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ.
ರಾಜಕೀಯ ಜೀವನವನ್ನು ಆರ್ಜೆಡಿಯಲ್ಲಿ ಆರಂಭಿಸಿ ಬಳಿಕ ಜೆಡಿಯು ಹಾಗೂ ನಂತರ ಬಿಜೆಪಿಗೆ ಸೇರ್ಪಡೆಯಾದ ಸಾಮ್ರಾಟ್ ಚೌಧರಿ, ರಾಜ್ಯ ಬಿಜೆಪಿ ಅಧ್ಯಕ್ಷರಾಗಿಯೂ ಹಾಗೂ ಉಪಮುಖ್ಯಮಂತ್ರಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಪ್ರಸ್ತುತ ಅವರು ಗೃಹ ಖಾತೆಯನ್ನೂ ನಿರ್ವಹಿಸುತ್ತಿದ್ದಾರೆ.
ಹೊಸ ಸರ್ಕಾರದ ಪ್ರಮಾಣ ವಚನ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಜರಾಗುವ ಸಾಧ್ಯತೆ ಇದೆ. ಪಟ್ನಾದ ಲೋಕಭವನದಲ್ಲಿ ನಡೆಯಲಿರುವ ಈ ಸಮಾರಂಭಕ್ಕೆ ಅಗತ್ಯ ಸಿದ್ಧತೆಗಳ ಪರಿಶೀಲನೆ ನಡೆಸಲಾಗಿದೆ ಎಂದು ಜಿಲ್ಲಾ ಆಡಳಿತದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.


