ಲಾಹೋರ್: ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಕ್ಯಾಂಪ್ಗಳ ಮೇಲೆ ಭಾರತ ನಡೆಸಿದ ಆಪರೇಷನ್ ಸಿಂಧೂರ(Operation Sindoor) ಹೆಸರಿನ ವಾಯು ದಾಳಿಯಲ್ಲಿ ಹತರಾದ ಹಲವಾರು ಭಯೋತ್ಪಾದಕರ ಅಂತ್ಯಕ್ರಿಯೆಯಲ್ಲಿ ಬುಧವಾರ ಪಾಕಿಸ್ತಾನ ಸೇನಾ ಸಿಬ್ಬಂದಿ ಮತ್ತು ನಿಷೇಧಿತ ಹಫೀಜ್ ಸಯೀದ್ ಜಮಾತ್-ಉದ್-ದವಾ (JDU) ಸದಸ್ಯರು ಭಾಗವಹಿಸಿದ್ದರು.
ಭಾರತದ ಸಶಸ್ತ್ರ ಪಡೆಗಳು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಾದ್ಯಂತ 9 ಸ್ಥಳಗಳನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕ ಸಂಘಟನೆಗಳ ಮೇಲೆ ದಾಳಿ ನಡೆಸಿದ್ದು, 80ಕ್ಕೂ ಹೆಚ್ಚು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಸೈನ್ಯದ ಮೂಲಗಳು ತಿಳಿಸಿವೆ. ಇವರ ಅಂತ್ಯಕ್ರಿಯೆ ಲಾಹೋರ್ ಬಳಿ ನಡೆದಿದ್ದು, ಉಗ್ರರ ಮೃತದೇಹಗಳ ಮೇಲೆ ಪಾಕಿಸ್ತಾನದ ಧ್ವಜವನ್ನು ಹೊದಿಸಲಾಗಿತ್ತು. ಅಲ್ಲದೇ ಪಾಕಿಸ್ತಾನದ ಸೈನಿಕರು ಇವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದು ಇದಕ್ಕೆ ಸಂಬಂಧಿಸಿದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಲಾಹೋರ್ ಬಳಿಯ ಮುರಿಡ್ಕೆಯಲ್ಲಿ ಭಯೋತ್ಪಾದಕ ಸಂಬಂಧಿತ ಸ್ಥಳದ ಮೇಲೆ ಭಾರತೀಯ ಮಿಲಿಟರಿ ದಾಳಿಯಲ್ಲಿ ಸಾವಿಗೀಡಾದ ಮೂವರು ಭಯೋತ್ಪಾದಕರ ಅಂತ್ಯಕ್ರಿಯೆಯ ಪ್ರಾರ್ಥನೆಯ ನೇತೃತ್ವವನ್ನು ಲಷ್ಕರ್-ಎ-ತೈಬಾ (ಎಲ್ಇಟಿ) ಭಯೋತ್ಪಾದಕ ಹಫೀಜ್ ಅಬ್ದುಲ್ ರೌಫ್ ವಹಿಸಿದ್ದ. ಅಂತ್ಯಕ್ರಿಯೆಯಲ್ಲಿ ಪಾಕಿಸ್ತಾನ ಸೇನಾ ಸಿಬ್ಬಂದಿ, ಪೊಲೀಸರು, ನಾಗರಿಕ ಅಧಿಕಾರಿಗಳು ಮತ್ತು ಹಫೀಜ್ ಸಯೀದ್ ಸ್ಥಾಪಿಸಿದ ನಿಷೇಧಿತ ಜಮಾತ್-ಉದ್-ದವಾ (ಜೆಯುಡಿ) ಸದಸ್ಯರು ಭಾಗವಹಿಸಿದ್ದರು.
ಲಾಹೋರ್ ಬಳಿಯ ಮುರಿಡ್ಕೆಯಲ್ಲಿರುವ ಭಯೋತ್ಪಾದಕ ಸಂಬಂಧಿತ ಸ್ಥಳದ ಮೇಲೆ ಭಾರತೀಯ ಮಿಲಿಟರಿ ದಾಳಿಯಲ್ಲಿ ಸಾವನ್ನಪ್ಪಿದ ಮೂವರು ಪುರುಷರ ಅಂತ್ಯಕ್ರಿಯೆಯ ಪ್ರಾರ್ಥನೆಯ ನೇತೃತ್ವವನ್ನು ಲಷ್ಕರ್-ಎ-ತೈಬಾ (ಎಲ್ಇಟಿ) ಭಯೋತ್ಪಾದಕ ಹಫೀಜ್ ಅಬ್ದುಲ್ ರೌಫ್ ವಹಿಸಿದ್ದರು. ಅಂತ್ಯಕ್ರಿಯೆಯಲ್ಲಿ ಪಾಕಿಸ್ತಾನ ಸೇನಾ ಸಿಬ್ಬಂದಿ, ಪೊಲೀಸರು, ನಾಗರಿಕ ಅಧಿಕಾರಿಗಳು ಮತ್ತು ಹಫೀಜ್ ಸಯೀದ್ ಸ್ಥಾಪಿಸಿದ ನಿಷೇಧಿತ ಜಮಾತ್-ಉದ್-ದವಾ (ಜೆಯುಡಿ) ಸದಸ್ಯರು ಭಾಗವಹಿಸಿದ್ದರು.
ಖಾರಿ ಅಬ್ದುಲ್ ಮಲಿಕ್, ಖಾಲಿದ್ ಮತ್ತು ಮುದಾಸೀರ್ ಅಂತ್ಯಕ್ರಿಯೆಯ ಪ್ರಾರ್ಥನೆಯನ್ನು ಮುರಿಡ್ಕೆಯಲ್ಲಿ ಹೆಚ್ಚಿನ ಭದ್ರತೆಯ ನಡುವೆ ನಡೆಸಲಾಯಿತು ಎಂದು ಜೆಯುಡಿ ರಾಜಕೀಯ ವಿಭಾಗವಾದ ಪಾಕಿಸ್ತಾನ ಮಾರ್ಕಾಜಿ ಮುಸ್ಲಿಂ ಲೀಗ್ನ ವಕ್ತಾರ ತಬಿಶ್ ಖಯ್ಯೂಮ್ ಹೇಳಿದ್ದಾನೆ. ಉಗ್ರರಾದ ಖಾರಿ ಅಬ್ದುಲ್ ಮಲಿಕ್, ಖಾಲಿದ್ ಮತ್ತು ಮುದಾಸೀರ್ ಎಂಬವರು ಜೆಯುಡಿ ಸದಸ್ಯರಾಗಿದ್ದರು ಮತ್ತು ದಾಳಿಯಲ್ಲಿ ನಾಶವಾದ ಮಸೀದಿಯಲ್ಲಿ ಪ್ರಾರ್ಥನಾ ಮುಖ್ಯಸ್ಥರು ಮತ್ತು ಉಸ್ತುವಾರಿಗಳಾಗಿದ್ದರು ಎಂದು ವರದಿಯಾಗಿದೆ. ಮತ್ತೊಂದು ವೀಡಿಯೊ ಪಾಕಿಸ್ತಾನ ಸೇನಾ ಸಿಬ್ಬಂದಿ ಪಾಕಿಸ್ತಾನ ಧ್ವಜದಲ್ಲಿ ಸುತ್ತಿದ ಶವಪೆಟ್ಟಿಗೆಯನ್ನು ಮುರಿಡ್ಕೆಯಲ್ಲಿ ಹೊತ್ತೊಯ್ಯುತ್ತಿರುವುದನ್ನು ತೋರಿಸಿದೆ.
ಏಪ್ರಿಲ್ 22 ರಂದು ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವಿಗೆ ಪ್ರತೀಕಾರವಾಗಿ ಭಾರತ ಈ ದಾಳಿ ನಡೆಸಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಾಗರಿಕರ ಮೇಲೆ ನಡೆದ ಮಾರಕ ದಾಳಿಯ ಕೆಲವು ದಿನಗಳ ನಂತರ, ಭಾರತವು ಸವಾಯಿ ನಲ್ಲ, ಸರ್ಜಲ್, ಮುರಿಡ್ಕೆ, ಕೊಟ್ಲಿ, ಕೊಟ್ಲಿ ಗುಲ್ಪುರ್, ಮೆಹಮೂನಾ ಜೋಯಾ, ಭಿಂಬರ್ ಮತ್ತು ಬಹವಾಲ್ಪುರ್ ಎಂಬ ಒಂಬತ್ತು ಭಯೋತ್ಪಾದಕ ತಾಣಗಳ ಮೇಲೆ ನಿಖರವಾದ ದಾಳಿಗಳನ್ನು ನಡೆಸಿತು.
ಪಾಕಿಸ್ತಾನದಲ್ಲಿ ನಾಲ್ಕು ಮತ್ತು ಪಿಒಕೆಯಲ್ಲಿ ಐದು ಒಟ್ಟು ಒಂಬತ್ತು ಸ್ಥಳಗಳನ್ನು ಆಪರೇಷನ್ ಸಿಂಧೂರ ಅಡಿಯಲ್ಲಿ ದಾಳಿಗಾಗಿ ಆಯ್ಕೆ ಮಾಡಲಾಗಿತ್ತು ಹಾಗೂ ಅದರಂತೆ ಕ್ಷಿಪಣಿ ದಾಳಿ ನಡೆಸಲಾಯಿತು. ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ನ ಭದ್ರಕೋಟೆಯಾದ ಬಹವಾಲ್ಪುರ್ ಮತ್ತು ಲಷ್ಕರ್-ಎ-ತೈಬಾದ ಪ್ರಧಾನ ಕಚೇರಿಯಾದ ಮುರಿಡ್ಕೆ ಈ ಸ್ಥಳಗಳಲ್ಲಿ ಸೇರಿವೆ.
ಪಾಕಿಸ್ತಾನದ ಬಹವಾಲ್ಪುರದಲ್ಲಿ ಭಾರತೀಯ ದಾಳಿಯಲ್ಲಿ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ತನ್ನ ಕುಟುಂಬದ 10 ಸದಸ್ಯರು ಮತ್ತು ನಾಲ್ವರು ಸಹಾಯಕರು ಸಾವಿಗೀಡಾಗಿದ್ದಾರೆ ಎಂದು ಹೇಳಿದ್ದಾನೆ ಎಂದು ಬಿಬಿಸಿ ಉರ್ದು ವರದಿ ಮಾಡಿದೆ.