ಬೆಳಗಾವಿ: ಮಹಾನಗರ ಪಾಲಿಕೆ ಪರಿಷತ್ ಸಭೆಯಲ್ಲಿ ಮರಾಠಿಯಲ್ಲಿ ದಾಖಲೆ ನೀಡುವಂತೆ ಎಂಇಎಸ್ ಬೆಂಬಲಿತ ಸದಸ್ಯ ರವಿ ಸಾಳುಂಕೆ ಕೇಳಿರುವುದನ್ನು ಖಂಡಿಸಿದ ಕರ್ನಾಟಕ ರಕ್ಷಣಾ ವೇದಿಕೆ(ಟಿ.ಎ.ನಾರಾಯಣಗೌಡ ಬಣ) ಕಾರ್ಯಕರ್ತರು ಪಾಲಿಕೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಸದಸ್ಯನ ಸದಸ್ಯತ್ವ ರದ್ದು ಮಾಡುವಂತೆ ಒತ್ತಾಯಿಸಿ ಮಹಾನಗರ ಪಾಲಿಕೆ ಮೇಲೆ ಒತ್ತಡ ಹೇರಿದರು.
ಪಾಲಿಕೆ ಸಭಾಂಗಣದಲ್ಲಿ ಸಭೆ ನಡೆದಿರುವ ಮಧ್ಯೆಯೂ ಹೊರಗಡೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪೊಲೀಸರು ಬಿಗಿ ಭದ್ರತೆ ಕೈಗೊಂಡರು.
ಮರಾಠಿಯಲ್ಲಿ ದಾಖಲೆ ಕೇಳಿದ ಸದಸ್ಯರನ್ನು ಅನರ್ಹಗೊಳಿಸಬೇಕು ಎಂದು ಕಾರ್ಯಕರ್ತರು ಪಟ್ಟು ಹಿಡಿದರು.