ಬೆಂಗಳೂರು: ರಾಜ್ಯದಲ್ಲಿ ಕೊಂಚ ವಿರಾಮ ನೀಡಿರುವ ಮಳೆ, ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಮತ್ತೆ ಹೆಚ್ಚಾಗುವ ಮುನ್ಸೂಚನೆ ಇದೆ. ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಆಗಸ್ಟ್ 3 ರಿಂದ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ.
ಆಗಸ್ಟ್ 4 ರಂದು ಕರ್ನಾಟಕದಾದ್ಯಂತ ಸಾಧಾರಣ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಆಗಸ್ಟ್ 5 ರಂದು ಬೆಂಗಳೂರು ನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರಕ್ಕೆ ಅತಿ ಭಾರಿ ಮಳೆಯ ಹಿನ್ನೆಲೆ ಆರೆಂಜ್ ಅಲರ್ಟ್ ಕೊಡಲಾಗಿದೆ. ಆಗಸ್ಟ್ 6 ರಂದು ಹಾಸನ ಹಾಗೂ ಕೊಡಗಿಗೆ ಭಾರಿ ಮಳೆ ಆಗಲಿದೆ.
ಆಗಸ್ಟ್ 3ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಲಘು ಅಥವಾ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡಿನ ಬೀದರ, ಕಲಬುರಗಿ, ಕೊಪ್ಪಳ, ಗದಗ ಮತ್ತು ಧಾರವಾಡ , ಬಾಗಲಕೋಟೆ, ಬೆಳಗಾವಿ, ಹಾವೇರಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಾಮರಾಜನಗರ, ಮಂಡ್ಯ, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಅನೇಕ ಕಡೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಬಿರುಗಾಳಿ (40-50 ಕಿ.ಮೀ ವೇಗದಲ್ಲಿ) ಬೀಸುವ ಸಾಧ್ಯತೆಯಿದೆ.
ಆಗಸ್ಟ್ 4 ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ನಿರಂತರ ಗಾಳಿ (30-40 ಕಿ.ಮೀ ವೇಗದಲ್ಲಿ) ಸಹಿತ ಲಘು ಅಥವಾ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಬಿರುಗಾಳಿ (40-50 ಕಿ.ಮೀ ವೇಗದಲ್ಲಿ) ಸಹಿತ ಲಘು ಅಥವಾ ಸಾಧಾರಣ ಮಳೆ ಆಗಲಿದೆ. ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಬಿರುಗಾಳಿ (40-50 ಕಿ.ಮೀ ವೇಗದಲ್ಲಿ) ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಕೊಡಗು, ಹಾಸನ ಮತ್ತು ರಾಮನಗರ ಜಿಲ್ಲೆಗಳಲ್ಲಿ ಅನೇಕ ಕಡೆಗಳಲ್ಲಿ ಗುಡುಗು ಸಹಿತ ಬಿರುಗಾಳಿ (40-50 ಕಿ.ಮೀ ವೇಗದಲ್ಲಿ) ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಆಗಸ್ಟ್ 5ರಂದು ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಗುಡುಗು-ಬಿರುಗಾಳಿ ಸಹಿತ (40-50 ಕಿ.ಮೀ ವೇಗದಲ್ಲಿ) ಸಹಿತ ಭಾರಿ ಅಥವಾ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಮಂಡ್ಯ, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಬಿರುಗಾಳಿ (40-50 ಕಿ.ಮೀ ವೇಗದಲ್ಲಿ) ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಆಗಸ್ಟ್ 6ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಮಂಡ್ಯ, ಮೈಸೂರು, ರಾಮನಗರ, ಹಾಸನ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಲಾಗಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.