ಬೆಳಗಾವಿ : ಚಿಕ್ಕೋಡಿ ತಾಲೂಕು ಇಂಗಳಿ ಗ್ರಾಮದಲ್ಲಿ ಈಜಲು ತೆರಳಿದ್ದ ಮೂರು ಮಕ್ಕಳು ಕೃಷಿಹೊಂಡದಲ್ಲಿ ಮುಳುಗಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಇಂಗಳಿ ಗ್ರಾಮದ ಪೃಥ್ವಿರಾಜ್,ಅಥರ್ವ, ಸಮರ್ಥ ಮೃತ ಬಾಲಕರು. ಈಜು ಕಲಿಯಲು ಹೋಗಿದ್ದ ಇವರಿಗೆ ಈಜಲು ಬರುತ್ತಿರಲಿಲ್ಲ. ಹೀಗಾಗಿ ಇವರು ಕೃಷಿಹೊಂಡದಿಂದ ಮೇಲೆ ಬರಲು ಸಾಧ್ಯವಾಗದೆ ಮೃತಪಟ್ಟಿದ್ದಾರೆ. ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.