ಬೆಳಗಾವಿ: ಇಂದು ಬೆಳಗಾವಿಯ ಕಾಡಾ ಕಚೇರಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳಕರ ಅವರ ಉಪಸ್ಥಿತಿಯಲ್ಲಿ ನೂತನ ಕಾಡಾ ಅಧ್ಯಕ್ಷರಾಗಿ ಯುವರಾಜ್ ಕದಮ್ ಅಧಿಕಾರ ಸ್ವೀಕರಿಸಿದರು.
ಈ ವೇಳೆ ನೂತನ ಕಾಡಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಯುವರಾಜ್ ಕದಮ್ ಅವರಿಗೆ ಅಲ್ಲೇ ಇದ್ದ ಮುಖಂಡರು ಹೂಮಾಲೆ ಹಾಕಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ನೂತನ ಕಾಡಾ ಅಧ್ಯಕ್ಷರು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಶಾಲು ಹೊದಿಸಿ ಹೂಗುಚ್ಚ ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ನೂತನ ಕಾಡಾ ಅಧ್ಯಕ್ಷ ಯುವರಾಜ್ ಕದಮ್ ಮಾತನಾಡಿ, ನನ್ನ ಸೇವೆಯನ್ನು ಗುರುತಿಸಿ ಪಕ್ಷ ಅವಕಾಶ ನೀಡಿದೆ. ಅದನ್ನು ಬಳಸಿಕೊಂಡು ಬಡವರ ಪರವಾಗಿ ಕೆಲಸ ಮಾಡುತ್ತೇನೆ. ಯೋಜನೆಗಳ ಅನುಷ್ಠಾನಕ್ಕೆ ಕ್ರಮ ವಹಿಸುತ್ತೇನೆ ಎಂದರು. ಈ ವೇಳೆ ಶಾಸಕ ರಾಜು ಕಾಗೆ, ಮಾಜಿ ಶಾಸಕ ಶಾಮ್ ಘಾಟಗೆ, ವಿ.ಪ. ಸದಸ್ಯ ಚನ್ನರಾಜ ಹೊಟ್ಟಿಹೊಳಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಇತರರು ಇದ್ದರು.